July 12, 2026
Sunday, July 12, 2026
spot_img

ಓದೋ ಅವಶ್ಯಕತೆ ಇಲ್ಲ, ಪರೀಕ್ಷೆ ಬರೆಯಬೇಕಿದ್ದ ಪಿಯುಸಿ ವಿದ್ಯಾರ್ಥಿನಿ ಮೇಲೆ ಸೋದರಮಾವನಿಂದ ಹಲ್ಲೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಓದೋ ಅವಶ್ಯಕತೆ ಇಲ್ಲ ಎಂದು ಸೋದರಮಾವನೊಬ್ಬ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಮೇಲೆ ಮನಬಂದಂತೆ ಹಲ್ಲೆ ನಡೆಸಿದ್ದಾನೆ. ಮೈಸೂರಿನ ನಂಜನಗೂಡು ತಾಲೂಕಿನ ಪಾಳ್ಯ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಪೂರ್ಣಿಮಾ ಹಲ್ಲೆಗೊಳಗಾದ ವಿದ್ಯಾರ್ಥಿನಿ.

ಪಿಯುಸಿ ಪರೀಕ್ಷೆ ಬರೆದು ಬಂದ ವಿದ್ಯಾರ್ಥಿನಿ ಮೇಲೆ ಸೋದರ ಮಾವ ಸೋಮಣ್ಣ ಮನಬಂದಂತೆ ದೊಣ್ಣೆಯಿಂದ ಹಲ್ಲೆ ಮಾಡಿದ್ದಾನೆ. ಹಳೇ ದ್ವೇಷದ ಹಿನ್ನೆಲೆಯಲ್ಲಿ ಆಕೆ ಮತ್ತೆ ಪರೀಕ್ಷೆಗೆ ಹೋಗಬಾರದು ಎಂದು ಹೀಗೆ ಮಾಡಿದ್ದಾನೆ.

ಮಗಳಿಗೆ ಹೊಡೆಯಬೇಡ ಎಂದು ಅಡ್ಡಬಂದ ಪೋಷಕರ ಮೇಲೆಯೂ ಸೋಮಣ್ಣ ಹಲ್ಲೆ ಮಾಡಿದ್ದಾನೆ. ಸದ್ಯ ಯುವತಿ ಪೂರ್ಣಿಮಾಳನ್ನ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸೋಮಣ್ಣ ಸೇರಿ 7 ಜನರ ವಿರುದ್ಧ ನಂಜನಗೂಡು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !