ಪಠ್ಯ ಪರಿಷ್ಕರಣೆಗೆ ನೂತನ ಸಮಿತಿ ರಚನೆ ಇಲ್ಲ: ಸಚಿವ ನಾಗೇಶ್

ಹೊಸದಿಗಂತ ವರದಿ, ಮಡಿಕೇರಿ:

ರಾಜ್ಯದಲ್ಲಿ ಪಠ್ಯ ಪರಿಷ್ಕರಣೆಗೆ ನೂತನ ಸಮಿತಿ ರಚನೆ ಮಾಡುವುದಿಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಅವರು ಸ್ಪಷ್ಟಪಡಿಸಿದ್ಧಾರೆ.
ಕುಶಾಲನಗರದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರೋಹಿತ್ ಚಕ್ರತೀರ್ಥ ನೇತೃತ್ವದ ಪಠ್ಯಪುಸ್ತಕ ಪರಿಷ್ಕರಣಾ ಸಮಿತಿ ರಚಿಸಿರುವ ಬಸವಣ್ಣನವರ ಒಂದು ಪಾಠ ಮಾತ್ರ ತಿದ್ದುಪಡಿ ಆಗಲಿದೆ. ಉಳಿದಂತೆ ಇಲಾಖೆಯ ಅಧಿಕಾರಿಗಳು ಪರಿಶೀಲಿಸುತ್ತಾರೆ ಎಂದು ಹೇಳಿದರು.
ಈಗಾಗಲೇ ಶೇ 80 ರಷ್ಟು ಪಠ್ಯ ಪುಸ್ತಕ ವಿತರಣೆಯಾಗಿದ್ದು, ಅಧಿಕಾರಿಗಳ ಸಲಹೆ ಪಡೆದು ಪರಿಷ್ಕರಣೆ ಮಾಡುತ್ತೇವೆ ಎಂದು ಸಚಿವರು ತಿಳಿಸಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!