ಬಂಡೀಪುರ ಅರಣ್ಯದಲ್ಲಿ ರಾತ್ರಿ ಸಂಚಾರ ಇಲ್ಲ: ಸಚಿವ ಈಶ್ವರ್ ಖಂಡ್ರೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಬಂಡೀಪುರ ಅರಣ್ಯದಲ್ಲಿ ರಾತ್ರಿ ಸಂಚಾರ ಇಲ್ಲ ಎಂದು ಅರಣ್ಯ ಸಚಿವ ಈಶ್ವರ್ ಖಂಡ್ರೆ ಸ್ಫಷ್ಟಪಡಿಸಿದ್ದಾರೆ.

ಬಂಡೀಪುರ ಅರಣ್ಯದಲ್ಲಿ ರಾತ್ರಿ ಸಂಚಾರಕ್ಕೆ ಅವಕಾಶ ನೀಡುವ ಪರವಾಗಿ ವಯನಾಡು ಸಂಸದೆ ಪ್ರಿಯಾಂಕಾ ಗಾಂಧಿಯವರು ಇತ್ತೀಚೆಗೆ ಮಾತಾಡಿದ್ದರು. ಡಿಸಿಎಂ ಡಿ.ಕೆ.ಶಿವಕುಮಾರ್ ಅವರಿಂದಲೂ ಪ್ರಿಯಾಂಕ ಗಾಂಧಿ ಅವರ ನಿಲುವಿಗೆ ಬೆಂಬಲ ವ್ಯಕ್ತವಾಗಿತ್ತು. ಈ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಸದ್ಯ ರಾತ್ರಿ 9 ಗಂಟೆವರೆಗೆ ಮಾತ್ರ ರಾತ್ರಿ ಸಂಚಾರಕ್ಕೆ ಅವಕಾಶ ಇದೆ. ಅದು ಹೊರತುಪಡಿಸಿ ರಾತ್ರಿ 9 ಗಂಟೆ ನಂತರ 2 ಬಸ್‌ಗಳ ಮಾತ್ರ ಸಂಚಾರಕ್ಕೆ ಅವಕಾಶ ಕೊಡಲಾಗಿದೆ ಎಂದು ತಿಳಿಸಿದ್ದಾರೆ.

ಇದನ್ನು ಹೊರತುಪಡಿಸಿ ಆಸ್ಪತ್ರೆ ಸೇರಿ ಎಮರ್ಜೆನ್ಸಿ ಇದ್ದರೆ ಅದಕ್ಕೂ ಅವಕಾಶ ಮಾಡಿಕೊಡಲಾಗಿದೆ. ಉಳಿದಂತೆ ವನ್ಯಜೀವಿ ಸಂರಕ್ಷಣೆ ಹಿನ್ನಲೆ ರಾತ್ರಿ ಸಂಚಾರಕ್ಕೆ ಅವಕಾಶ ಇಲ್ಲ. ಹೀಗಾಗಿ ರಾತ್ರಿ ಸಂಚಾರ ಸಾಧ್ಯವಿಲ್ಲ‌. ಈ ಬಗ್ಗೆ ನಮ್ಮ ನಾಯಕರಿಗೆ ಏನಾದರೂ ಮಾಹಿತಿ ಅಗತ್ಯವಿದ್ದರೆ ಮನವರಿಕೆ ಮಾಡುತ್ತೇನೆ ಎಂದಿದ್ದಾರೆ.

- Advertisement - Prestige

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!