ಹೊಸದಿಗಂತ ಡಿಜಿಟಲ್ ಡೆಸ್ಕ್:
ಪ್ರಜ್ವಲ್ ರೇವಣ್ಣ ಬಗ್ಗೆ ಮಾತನಾಡಲು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಿಂದೇಟು ಹಾಕುತ್ತಿದ್ದಾರೆ. ಮಹಿಳೆ ಅಪಹರಣಕ್ಕೆ ಸಂಬಂಧಿಸಿದಂತೆ ಎಚ್ಡಿ ರೇವಣ್ಣ ಬಗ್ಗೆ ಮಾತನಾಡಿದ ಖರ್ಗೆ, ಎಸ್ಐಟಿ ಪ್ರಕರಣ ದಾಖಲಿಸಿಕೊಳ್ಳಲಿದ್ದಾರೆ. ಈ ರೀತಿ ಮಾಡುವವರಿಗೆ ಬುದ್ಧಿ ಬರಬೇಕು. ನೊಂದ ಕುಟುಂಬಗಳಿಗೆ ನ್ಯಾಯ ಸಿಗಬೇಕು ಎಂದರು.
ಕಾನೂನಿನಿಂದ ಯಾರೂ ಹೊರತಾಗಿಲ್ಲ, ಕಾನೂನು ಕಟ್ಟುನಿಟ್ಟಾಗಿದೆ, ಇದು ದಶಕಗಳಿಂದ ಜಾರಿಯಲ್ಲಿದೆ ಎಂದು ಹೇಳಿದ್ದಾರೆ. ಈ ಪ್ರಕರಣವನ್ನು ಯಾರೂ ರಾಜಕೀಯ ಉದ್ದೇಶಕ್ಕೆ ಬಳಸಿಕೊಳ್ಳಬಾರದು. ಪ್ರಜ್ವಲ್ ಬಗ್ಗೆ ನಾನು ಮಾತನಾಡಲಾರೆ ಎಂದು ಮಲ್ಲಿಕಾರ್ಜುನ ಖರ್ಗೆ ಹೇಳಿದರು.