ಕಾನೂನಿನಿಂದ ಯಾರಿಗೂ ಬಿಡುಗಡೆ ಇಲ್ಲ, ಸಂತ್ರಸ್ಥ ಕುಟುಂಬಗಳಿಗೆ ನ್ಯಾಯ ಸಿಗಬೇಕು: ಖರ್ಗೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಪ್ರಜ್ವಲ್ ರೇವಣ್ಣ ಬಗ್ಗೆ ಮಾತನಾಡಲು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಿಂದೇಟು ಹಾಕುತ್ತಿದ್ದಾರೆ. ಮಹಿಳೆ ಅಪಹರಣಕ್ಕೆ ಸಂಬಂಧಿಸಿದಂತೆ ಎಚ್​ಡಿ ರೇವಣ್ಣ ಬಗ್ಗೆ ಮಾತನಾಡಿದ ಖರ್ಗೆ, ಎಸ್‌ಐಟಿ ಪ್ರಕರಣ ದಾಖಲಿಸಿಕೊಳ್ಳಲಿದ್ದಾರೆ. ಈ ರೀತಿ ಮಾಡುವವರಿಗೆ ಬುದ್ಧಿ ಬರಬೇಕು. ನೊಂದ ಕುಟುಂಬಗಳಿಗೆ ನ್ಯಾಯ ಸಿಗಬೇಕು ಎಂದರು.

ಕಾನೂನಿನಿಂದ ಯಾರೂ ಹೊರತಾಗಿಲ್ಲ, ಕಾನೂನು ಕಟ್ಟುನಿಟ್ಟಾಗಿದೆ, ಇದು ದಶಕಗಳಿಂದ ಜಾರಿಯಲ್ಲಿದೆ ಎಂದು ಹೇಳಿದ್ದಾರೆ. ಈ ಪ್ರಕರಣವನ್ನು ಯಾರೂ ರಾಜಕೀಯ ಉದ್ದೇಶಕ್ಕೆ ಬಳಸಿಕೊಳ್ಳಬಾರದು. ಪ್ರಜ್ವಲ್ ಬಗ್ಗೆ ನಾನು ಮಾತನಾಡಲಾರೆ ಎಂದು ಮಲ್ಲಿಕಾರ್ಜುನ ಖರ್ಗೆ ಹೇಳಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!