ಮೂರು ಡಿಸಿಎಂ ಚರ್ಚೆ ಹೈಕಮಾಂಡ್ ಅಂಗಳಕ್ಕಿಲ್ಲ: ಖರ್ಗೆ

ಹೊಸದಿಗಂತ ವರದಿ ಕಲಬುರಗಿ :

ಪ್ರಸ್ತುತ ರಾಜ್ಯದಲ್ಲಿ ಭುಗಿಲೆದ್ದ ಮೂರು ಡಿಸಿಎಂ,ಗಳ ಕುರಿತಾದ ಬೇಡಿಕೆಗಳ ಚರ್ಚೆ ಹೈಕಮಾಂಡ್ ಅಂಗಳಕ್ಕೆ ಬಂದಿಲ್ಲ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸ್ಪಷ್ಟೀಕರಣ ನೀಡಿದ್ದಾರೆ.

ಮಂಗಳವಾರ ಕಲಬುರಗಿ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೂವರು ಡಿಸಿಎಂ ಚರ್ಚೆಗಳ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಅವರನ್ನೇ ಕೇಳಿ ಎಂದು ಹೇಳಿದರು.

ರಾಜ್ಯದಲ್ಲಿ ಎದ್ದಿರುವ ಮೂರು ಡಿಸಿಎಂ ಕೇವಲ ಊಹಾಪೋಹ ಅಷ್ಟೇ. ಚುನಾವಣೆಯ ಸಮಯದಲ್ಲಿ ಈ ವಿಚಾರವನ್ನು ತರುವುದು ಅಪ್ರಸ್ತುತ ಎಂದ ಅವರು, ಈ ಸಮಯದಲ್ಲಿ ಸರ್ಕಾರ ಸರಿಯಾಗಿ ನಡೆಸಿ ನಾವು ಕೊಟ್ಟಿರುವ ಗ್ಯಾರಂಟಿಗಳನ್ನು ಅನುಷ್ಟಾನಕ್ಕೆ ತರುವುದು ನಮ್ಮ ಮುಖ್ಯ ಗುರಿಯಾಗಿರಬೇಕು ಎಂದರು.

ಗ್ಯಾರಂಟಿಗಳ ಅನುಷ್ಟ್ರಾನವನ್ನು ಸರಿಯಾಗಿ ಸಿದ್ದರಾಮಯ್ಯ ಮಾಡಿಕೊಂಡು ಹೋಗುತ್ತಿದ್ದು, ನಮ್ಮ ಗುರಿ ಮುಟ್ಟುವವರೆಗೂ ಇಂತಹ ವಿಚಾರಗಳು ಯಾವುದು ತರಬಾರದು ಎಂದು ಹೇಳುವ ಮೂಲಕ, ಮೂರು ಡಿಸಿಎಂ ಸ್ಥಾನಗಳ ವಿಷಯಕ್ಕೆ ತಿಲಾಂಜಲಿ ಇಟ್ಟಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!