ಭಾರತ-ಪಾಕ್ ನಡುವಿನ ವಿಷಯಕ್ಕೆ ಯಾರ ಮಧ್ಯಸ್ಥಿಕೆಯೂ ಬೇಕಾಗಿಲ್ಲ.. ಟ್ರಂಪ್ ಗೆ ಸ್ಪಷ್ಟ ಸಂದೇಶ

ಹೊಸದಿಗಂತ ಡಿಜಿಟಲ್ ಡೆಸ್ಕ್:

 

ವ್ಯಾಪಾರ ರಿಯಾಯಿತಿಗಳಿಗೆ ಬದಲಾಗಿ ಭಾರತ ಮತ್ತು ಪಾಕಿಸ್ತಾನ ನಡುವಿನ ಶಾಂತಿ ಒಪ್ಪಂದವನ್ನು ಮಧ್ಯವರ್ತಿಯಾಗಿ ಮಾಡಲು ಸಹಾಯ ಮಾಡಿದ್ದೇವೆ ಎಂಬ ಅಮೆರಿಕದ ಹೇಳಿಕೆಯನ್ನು ವಿದೇಶಾಂಗ ಸಚಿವಾಲಯದ ವಕ್ತಾರ ರಣಧೀರ್ ಜೈಸ್ವಾಲ್ ತಿರಸ್ಕರಿಸಿದ್ದಾರೆ.

ಭಾರತ ಮತ್ತು ಪಾಕಿಸ್ತಾನ ಉದ್ವಿಗ್ನತೆಯ ಮಧ್ಯೆ ಕಾಶ್ಮೀರದ ಕುರಿತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ನೀಡಿರುವ ಹೇಳಿಕೆಗೆ ಭಾರತ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ವಿದೇಶಾಂಗ ಸಚಿವಾಲಯವು ಕಾಶ್ಮೀರದ ವಿಚಾರದಲ್ಲಿ ಭಾರತದ ನಿಲುವನ್ನು ಸ್ಪಷ್ಟಪಡಿಸಿದೆ.

ಇಂದು ಪತ್ರಿಕಾಗೋಷ್ಠಿಯಲ್ಲಿ ವಿದೇಶಾಂಗ ಸಚಿವಾಲಯದ ವಕ್ತಾರ ರಣಧೀರ್ ಜೈಸ್ವಾಲ್ ಮಾತನಾಡಿ.. ಕಾಶ್ಮೀರದಲ್ಲಿ ಯಾರ ಮಧ್ಯಸ್ಥಿಕೆಯನ್ನೂ ಭಾರತ ಸ್ವೀಕರಿಸುವುದಿಲ್ಲ. ಜಮ್ಮು ಮತ್ತು ಕಾಶ್ಮೀರ ಭಾರತ ಮತ್ತು ಪಾಕಿಸ್ತಾನದ ನಡುವಿನ ವಿಷಯ ಮಾತ್ರ ಎಂದು ತಿಳಿಸಿದ್ದಾರೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!