ಹೊಸದಿಗಂತ ಡಿಜಿಟಲ್ ಡೆಸ್ಕ್:
ಇನ್ಮುಂದೆ ಸಾರ್ವಜನಿಕರು, ಶಾಸಕರು, ಮುಖಂಡರು ಹಾಗೂ ಕಾರ್ಯಕರ್ತರು ಯಾರೆಲ್ಲ ನನ್ನನ್ನು ಭೇಟಿ ಮಾಡಬೇಕು ಎಂದಾದರೆ ಸದಾಶಿವನಗರದ ಮನೆಗೆ ಬರಬೇಡಿ. ಬದಲಾಗಿ ಗೃಹ ಕಚೇರಿ ಕೃಷ್ಣಾದಲ್ಲಿ ಭೇಟಿ ಮಾಡೋಣ ಎಂದು ಸಿಎಂ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.
ಅನಿವಾರ್ಯ ಕಾರಣಗಳಿಂದ ಸದಾಶಿವನಗರದ ಮನೆಯಲ್ಲಿ ಯಾರನ್ನೂ ಭೇಟಿ ಮಾಡೋದಿಲ್ಲ. ಇಲ್ಲಿಗೆ ಬರುವ ತೊಂದರೆ ತೆಗೆದುಕೊಳ್ಳಬೇಡಿ. ನನ್ನ ಮಾತನ್ನು ಅನ್ಯಥಾ ಭಾವಿಸಬೇಡಿ ಎಂದು ಮನವಿ ಮಾಡಿದ್ದಾರೆ.



