ಹೊಸದಿಗಂತ ಡಿಜಿಟಲ್ ಡೆಸ್ಕ್:
ನಮ್ಮ ರಾಜ್ಯದಲ್ಲಿ ಯಾವುದೇ ಆಪರೇಷನ್ ಇಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಮಹಾರಾಷ್ಟ್ರ ಸಿಎಂ ಏಕನಾಥ ಶಿಂದೆ ಅವರ ಆಪರೇಷನ್ ಸುಳಿವಿನ ಬಗ್ಗೆ ಸಿಎಂ ಮಾತನಾಡಿದ್ದು, ಯಾವುದೇ ಕಾರಣಕ್ಕೂ ಸರ್ಕಾರವನ್ನು ಆಪರೇಷನ್ ಮಾಡಲು ಸಾಧ್ಯವಿಲ್ಲ. ಅವರು ಭ್ರಮೆಯಲ್ಲಿ ಬದುಕುತ್ತಿದ್ದಾರೆ ಎಂದಿದ್ದಾರೆ.
ಈ ಹಿಂದೆ ಆಪರೇಷನ್ ಮಾಡಲು ಪ್ರಯತ್ನ ಪಟ್ಟು ವಿಫಲರಾಗಿದ್ದಾರೆ. ಈಗಲೂ ಪ್ರಯತ್ನ ಮಾಡುತ್ತಾನೇ ಇದ್ದಾರೆ. ಮಹಾರಾಷ್ಟ್ರದಲ್ಲಿ ಆದಂತೆ ಕರ್ನಾಟಕದಲ್ಲಿ ಆಗುವುದಿಲ್ಲ. ಲೋಕಸಭೆ ಚುನಾವಣೆಯಲ್ಲಿಯೂ ʼಇಂಡಿಯಾʼ ಮೈತ್ರಿಕೂಟ ಗೆಲ್ಲುತ್ತದೆ ಎಂದು ಹೇಳಿದರು.