ಹೊಸದಿಗಂತ ನಾಗಮಂಗಲ:
ಆರೋಗ್ಯ ಸಮಸ್ಯೆಯಿಂದಾಗಿ ಈ ಚುನಾವಣೆಯಲ್ಲಿ ನಾನು ಸಕ್ರೀಯವಾಗಿ ತೊಡಗಿಸಿಕೊಳ್ಳಲು ಸಾಧ್ಯವಾಗಲಿಲ್ಲ. ಮುಂದಿನ ದಿನಗಳಲ್ಲಿ ಸಕ್ರೀಯ ರಾಜಕಾರಣದ ಹಿಂಬಾಗಿಲಲ್ಲಿ ಇರುತ್ತೇನೆ ಹೊರತು ರಾಜಕೀಯದಿಂದ ನಿವೃತ್ತಿ ಹೊಂದುವ ಪ್ರಶ್ನೆಯೇ ಇಲ್ಲ ಎಂದು ಮಾಜಿ ಸಂಸದ ಎಲ್.ಆರ್.ಶಿವರಾಮೇಗೌಡ ಸ್ಪಷ್ಟಪಡಿಸಿದರು.
ಪಟ್ಟಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮ ನಾಯಕರಾಗಿರುವ 91ವರ್ಷದ ಎಚ್.ಡಿ.ದೇವೇಗೌಡರೇ ಪ್ರಧಾನಿ ನರೇಂದ್ರ ಮೋದಿ ಅವರ ಎದುರು ಜಡಿದು ಭಾಷಣವಾಗ ನಾನೇಕೆ ರಾಜಕೀಯ ನಿವೃತ್ತಿ ಹೊಂದಲಿ. ಕ್ಷೇತ್ರವನ್ನು ತಮ್ಮ ಪುತ್ರ ಚೇತನ್ಗೌಡಗೆ ಬಿಟ್ಟುಕೊಟ್ಟು ಇನ್ನು ಮುಂದೆ ನಾಗಮಂಗಲದ ಚುನಾವಣೆ ಸ್ಪರ್ಧೆಯಿಂದ ಹಿಂದೆ ಸರಿಯುತ್ತೇನೆ. ಆದರೆ, ರಾಜಕೀಯದಿಂದ ನಿವೃತ್ತಿ ಹೊಂದುವುದಿಲ್ಲ ಎಂದರು.
ನನ್ನ ಆರೋಗ್ಯದ ದೃಷ್ಟಿಯಿಂದ ತಮ್ಮ ಪುತ್ರ ಚೇತನ್ಗೌಡ ಕ್ಷೇತ್ರದಲ್ಲಿ ರಾಜಕೀಯವನ್ನು ಮುಂದುವರಿಸಲಿ. ನಾನು ಚುನಾವಣಾ ರಾಜಕೀಯದಿಂದ ಸ್ವಲ್ಪ ದೂರ ಇರುತ್ತೇನೆಂದು ಚುನಾವಣೆ ಆರಂಭಕ್ಕೂ ಮುನ್ನವೇ ತಾಲೂಕಿನ ನಮ್ಮ ಪಕ್ಷದ ಐನೂರಕ್ಕೂ ಹೆಚ್ಚು ಮುಖಂಡರು ಹಾಗೂ ಕಾರ್ಯಕರ್ತರ ಸಭೆ ನಡೆಸಿ ಅವರ ಅಪ್ಪಣೆ ಪಡೆದಿದ್ದೆ. ಅದಕ್ಕಾಗಿಯೇ ಈ ಚುನಾವಣೆ ಸಂದರ್ಭದಲ್ಲಿ ನಾನು ಸಕ್ರೀಯವಾಗಿ ತೊಡಗಿಸಿಕೊಳ್ಳಲಿಲ್ಲ ಎಂದು ಹೇಳಿದರು.