ಚೀತಾ ಯೋಜನೆ ಮರುಪರಿಚಯಿಸುವ ಕುರಿತು ಸರ್ಕಾರವನ್ನು ಪ್ರಶ್ನಿಸಲು ಕಾರಣವಿಲ್ಲ: ಸುಪ್ರೀಂ ಕೋರ್ಟ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕೇಂದ್ರದ ಚೀತಾ ಯೋಜನೆ (Project Cheetah) ಮರುಪರಿಚಯಿಸುವ ಕಾರ್ಯಕ್ರಮಗಳ ಬಗ್ಗೆ ಸರ್ಕಾರವನ್ನು ಪ್ರಶ್ನಿಸಲು ಯಾವುದೇ ಕಾರಣವಿಲ್ಲ ಎಂದು ಸುಪ್ರೀಂ ಕೋರ್ಟ್ (Supreme Court) ಹೇಳಿದೆ.

ಮಧ್ಯಪ್ರದೇಶದ ಕುನೋ ರಾಷ್ಟ್ರೀಯ ಉದ್ಯಾನವನದಲ್ಲಿ (Kuno National Park) 9 ಚೀತಾಗಳ ಸಾವಿನ ಕುರಿತು ಸಲ್ಲಿಸಿದ್ದ ಅರ್ಜಿ ವಿಚಾರಣೆ ಇಂದು ನಡೆಸಿದರು.

ಕುನೋ ಉದ್ಯಾನಕ್ಕೆ ಬಿಡಲಾದ ಒಂದು ವರ್ಷ ಅವಧಿ ಪೂರೈಸುವುದರ ಒಳಗೆ ಮೂರು ಮರಿಗಳು ಸೇರಿದಂತೆ 9 ಚೀತಾಗಳು ಸಾವನ್ನಪ್ಪಿವೆ. ಇಲ್ಲಿನ ಹವಾಮಾನ ಪರಿಸ್ಥಿತಿ ಮತ್ತು ಅದರಿಂದಾಗುವ ಪರಿಣಾಮಗಳನ್ನು ತಿಳಿಯಲು ನಿರಂತರವಾಗಿ ಕೆಲಸ ನಡೆಯುತ್ತಿದೆ. ಅಲ್ಲದೇ ಪ್ರತಿ ವರ್ಷ 12 ರಿಂದ 14 ಹೊಸ ಚೀತಾಗಳನ್ನು ತರಿಸಲಾಗುತ್ತದೆ. ಕುನೋದಲ್ಲಿ ಸಮಸ್ಯೆಗಳಿವೆ ಆದ್ರೆ ಆತಂಕಕಾರಿ ಏನೂ ಅಲ್ಲ ಎಂದು ಸರ್ಕಾರ ಕೋರ್ಟ್‌ಗೆ ತಿಳಿಸಿದೆ.

ಮಧ್ಯಪ್ರದೇಶದ ರಾಷ್ಟ್ರೀಯ ಉದ್ಯಾನದಲ್ಲಿ ಸಾವನ್ನಪ್ಪಿದ 9 ಚೀತಾಗಳಲ್ಲಿ ಮೂರು ಮರಿಗಳು ಸೇರಿವೆ. ಕಳೆದ ವರ್ಷ ಸೆಪ್ಟೆಂಬರ್‌ನಲ್ಲಿ ನಮೀಬಿಯಾ ಮತ್ತು ದಕ್ಷಿಣ ಆಫ್ರಿಕಾದಿಂದ ತರಲಾದ 20 ಚೀತಾಗಳನ್ನು ರಾಷ್ಟ್ರೀಯ ಉದ್ಯಾನದಲ್ಲಿ ಬಿಡಲಾಗಿತ್ತು. ಅಂದಿನಿಂದ ಅಲ್ಲಿ ನಾಲ್ಕು ಮರಿಗಳು ಜನಿಸಿದ್ದವು.

ಕಳೆದ ನಾಲ್ಕು ದಿನಗಳ ಅಂತರದಲ್ಲಿ ಎರಡು ಗಂಡು ಚೀತಾಗಳು ಸಾವನ್ನಪ್ಪಿದ್ದು, ತೇಜಸ್ ಹೆಸರಿನ ಚೀತಾ ಜುಲೈ 11 ರಂದು ಸಾವನ್ನಪ್ಪಿತ್ತು. ಜುಲೈ 14 ರಂದು ಸೂರಜ್ ಹೆಸರಿನ ಚೀತಾದ ಶವ ಪತ್ತೆಯಾಗಿತ್ತು. ಇದಕ್ಕೂ ಮೊದಲು ಮಾರ್ಚ್ 27 ರಂದು ಸಶಾ ಎಂಬ ಹೆಣ್ಣು ಚೀತಾ ಮೂತ್ರಪಿಂಡದ ಕಾಯಿಲೆಯಿಂದ ಮೃತಪಟ್ಟಿತ್ತು. ಉದಯ್ ಹೆಸರಿನ ಚೀತಾ ಏಪ್ರಿಲ್ 23 ರಂದು ಹೃದಯ-ಶ್ವಾಸಕೋಶದ ವೈಫಲ್ಯದಿಂದ ಸಾವನ್ನಪ್ಪಿತ್ತು. ದಕ್ಷಾ ಹೆಸರಿನ ಹೆಣ್ಣು ಚೀತಾ ಮೇ 9 ರಂದು ಸಾವಿಗೀಡಾಗಿತ್ತು. ಹವಾಮಾನ ವೈಪರೀತ್ಯ ಮತ್ತು ನಿರ್ಜಲೀಕರಣದಿಂದ ಮೇ 25 ರಂದು ಎರಡು ಚಿರತೆ ಮರಿಗಳು ಹಾಗೂ ಮೇ 23 ರಂದು ಮತ್ತೊಂದು ಮರಿ ಸಾವನ್ನಪ್ಪಿದ್ದವು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!