ಹೊಸದಿಗಂತ ಡಿಜಿಟಲ್ ಡೆಸ್ಕ್:
ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿ ಪಕ್ಷ ಅಧಿಕಾರದಲ್ಲಿರುವವರೆಗೆ ಧರ್ಮದ ಆಧಾರದ ಮೇಲೆ ಯಾವುದೇ ಮೀಸಲಾತಿ ಇರುವುದಿಲ್ಲ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಸೋಮವಾರ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಂವಿಧಾನದಲ್ಲಿ ಧರ್ಮಾಧಾರಿತ ಮೀಸಲಾತಿ ಇಲ್ಲ ಎಂದು ಸ್ಪಷ್ಟವಾಗಿ ಬರೆಯಲಾಗಿದೆ. ಪ್ರಧಾನಿ ಮೋದಿ ಮತ್ತು ಬಿಜೆಪಿ ಅಧಿಕಾರದಲ್ಲಿರುವವರೆಗೆ ಅಂತಹ ಮೀಸಲಾತಿ ಅವಕಾಶ ನೀಡುವುದಿಲ್ಲ ಎಂದು ತಿಳಿಸಿದರು.
ದಲಿತ, ಪರಿಶಿಷ್ಟ ವರ್ಗ, ಹಿಂದುಳಿದ, ಅತ್ಯಂತ ಹಿಂದುಳಿದ ವರ್ಗಗಳಿಗೆ ನೀಡಲಾಗಿರುವ ಮೀಸಲಾತಿಯನ್ನು ಕಬಳಿಸಲು ಅವಕಾಶ ನೀಡುವುದಿಲ್ಲ. ಜೂನ್ 4 ರ ನಂತರ ವಿಪಕ್ಷಗಳ ಸ್ಥಿತಿ ಏನಾಗಲಿದೆ ಎಂಬುದನ್ನು ನೋಡಲಿದ್ದೀರಿ ಎಂದರು.