ರನ್ಯಾ ಕೇಸ್ ನಲ್ಲಿ ಹಿರಿಯ ಅಧಿಕಾರಿಗಳ ಪಾತ್ರ ಇಲ್ಲ: ಮುರುಗೇಶ್ ನಿರಾಣಿ ಸ್ಪಷ್ಟನೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ನಟಿ, ರನ್ಯಾ ರಾವ್ ಗೆ ಕೈಗಾರಿಕೆ ಜಮೀನು ಮಂಜೂರಾತಿಯಲ್ಲಿ ಕೈಗಾರಿಕೆ ಸಚಿವರದ್ದಾಗಲಿ, ಹಿರಿಯ ಅಧಿಕಾರಿಗಳದ್ದಾಗಲಿ ಪಾತ್ರವಿಲ್ಲ ಎಂದು ಮಾಜಿ ಕೈಗಾರಿಕೆ ಸಚಿವ, ಬಿಜೆಪಿ ಉಪಾಧ್ಯಕ್ಷ ಮುರುಗೇಶ್ ನಿರಾಣಿ ಸ್ಪಷ್ಟಪಡಿಸಿದ್ದಾರೆ.

ಈ ಕುರಿತು ವಿಡಿಯೋ ಹೇಳಿಕೆ ನೀಡಿಯಲ್ಲಿ ಮಾತನಾಡಿ, ಭೂ ಮಂಜೂರಾತಿ ಅರ್ಜಿಗಳ ಪರಿಶೀಲನೆಗೆ ಲ್ಯಾಂಡ್ ಅಡಿಟೆಡ್ ಕಮಿಟಿ ಮತ್ತು ಇಂಡಸ್ಟ್ರಿಯಲ್ ಸೆಕ್ರೆಟರಿ ಇರುತ್ತಾರೆ. 30 ಜನ ಹಿರಿಯ ಅಧಿಕಾರಿಗಳು ಸಾಧಕ-ಬಾಧಕ ಚರ್ಚಿಸಿ, ನಟಿ ರನ್ಯಾಗೆ ಜಾಗ ಅಲಾಟಮೆಂಟ್ ಮಾಡಿದ್ದಾರೆ ಎಂದರು.

ಇದರಲ್ಲಿ ಯಾವುದೇ ಅಧಿಕಾರಿಗಳ ಪಾತ್ರ ಅಥವಾ ಕಾನೂನು ಲೋಪದೋಷ ಇಲ್ಲ. ಯಾವುದೇ ರೀತಿ ನಾವು ಫೇವರ್ ಆಗಿ ಮಾಡಿಲ್ಲ. ಈ ಬಗ್ಗೆ ಎನೇ ಡೌಟ್ ಇದ್ದರೂ ನನ್ನನ್ನು ಸಂಪರ್ಕಿಸಬಹುದು. ನಾನು ಸ್ಪಷ್ಟೀಕರಣ ಕೊಡಲು ಸದಾ ಸಿದ್ಧನಿದ್ದೇನೆ ಎಂದ ಮಾಜಿ ಸಚಿವರು ತಿಳಿಸಿದ್ದಾರೆ.

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!