ವಿವಾದಕ್ಕಾಗಿ ಶಿಕ್ಷಣ ಸ್ಥಗಿತವಾಗುವುದು ಬೇಡ, ಶಾಲೆಗಳನ್ನು ಬೇಗ ಆರಂಭಿಸಿ: ಸಿಜೆ ರಿತುರಾಜ್ ಅವಸ್ಥಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಾಜ್ಯದಲ್ಲಿ ವಿವಾದದ ಅಲೆ ಎಬ್ಬಿಸಿರುವ ಹಿಜಾಬ್-ಕೇಸರಿ ಪ್ರಕರಣದ ವಿಚಾರಣೆ  ನಡೆಯುತ್ತಿದೆ.
ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ಥಿ ಅವರ ನೇತೃತ್ವದ ವಿಸ್ತೃತ ಪೀಠದಲ್ಲಿ ವಿಚಾರಣೆ ನಡೆಯುತ್ತಿದ್ದು, ಸರ್ಕಾರದ ಪರ ಪ್ರಭುಲಿಂಗ ನಾವದಗಿ, ಶಾಲಾ ಸಮಿತಿ ಪರವಾಗಿ ಪೂವಯ್ಯ ಅವರು ವಾದ ಮಂಡಿಸುತ್ತಿದ್ದಾರೆ.

ಅರ್ಜಿದಾರರ ಪರವಾಗಿ ದೇವದತ್ತ ಕಾಮತ್, ಮೊಹಮ್ಮದ್ ತಾಹಿರ್ ವಾದ ಮಂಡಿಸಲಿದ್ದಾರೆ. ಹಿಜಾಬ್ ವಿವಾದದ ಕಾರಣಕ್ಕಾಗಿ ಶಾಲೆಗಳನ್ನು ಸ್ಥಗಿತಗೊಳಿಸಿದ್ದಕ್ಕೆ ಬೇಸರ ವ್ಯಕ್ತಪಡಿಸಿದ ಸಿಜೆ ರಿತುರಾಜ್ ಅವಸ್ಥಿ, ಶಿಕ್ಷಣ ಸ್ಥಗಿತ ಮಾಡುವುದು ಸರಿಯಲ್ಲ ಎಂದು ಅಭಿಪ್ರಾಯ ಪಟ್ಟಿದ್ದಾರೆ.

ವಿವಾದದ ಕಾರಣಕ್ಕೆ ಶಿಕ್ಷಣ ಸ್ಥಗಿತ ಮಾಡಬಾರದು, ಶಾಲೆಗಳನ್ನು ಬೇಗ ಆರಂಭಿಸಿ, ವಿದ್ಯಾರ್ಥಿಗಳನ್ನು ಶಿಕ್ಷಣದಿಂದ ದೂರ ಇಡುವುದು ಸರಿಯಲ್ಲ ಎಂದಿದ್ದಾರೆ. ಇದನ್ನು ಸರ್ಕಾರದ ಪರ ವಕೀಲರು ಒಪ್ಪಿಕೊಂಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!