ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜಧಾನಿ ಬೆಂಗಳೂರಿನಲ್ಲಿ ನೀರಿನ ಸಮಸ್ಯೆ ಹೆಚ್ಚಾಗಿದೆ. ಮಳೆಗಾಲ ಆರಂಭವಾಗುವವರೆಗೆ ವರ್ಕ್ ಫ್ರಂ ಹೋಮ್ ಆದೇಶ ನೀಡಿ ಎಂದು ಬೆಂಗಳೂರಿಗರು ಸಿಎಂ ಸಿದ್ದರಾಮಯ್ಯಗೆ ಮನವಿ ಮಾಡುತ್ತಿದ್ದಾರೆ.
ನೀರಿನ ಬಿಕ್ಕಟ್ಟು ಮುಗಿಯುವವರೆಗೆ ಮಕ್ಕಳಿಗೆ ಆನ್ಲೈನ್ ಕ್ಲಾಸ್ ಹಾಗೂ ಐಟಿ ಕಂಪನಿಗಳಿಗೆ ವರ್ಕ್ ಫ್ರಮ್ ಹೋಮ್ ನೀಡಬೇಕೆಂದು ಸಾಮಾಜಿಕ ಜಾಲತಾಣಗಳ ಮೂಲಕ ಸಿಎಂಗೆ ಮನವಿ ಮಾಡಲಾಗುತ್ತಿದೆ.
ಆಫೀಸ್, ಕಚೇರಿಗಳ ನಿರ್ವಹಣೆಗೆ ಸಾಕಷ್ಟು ನೀರಿನ ಅಗತ್ಯ ಇರುತ್ತದೆ. ಸದ್ಯ ನೀರಿಲ್ಲದ ಪರಿಸ್ಥಿತಿಯಲ್ಲಿ ಮನೆಯಿಂದ ಕೆಲಸ ಮಾಡಲು ಅವಕಾಶ ನೀಡುವುದು ಉತ್ತಮ ಎಂದು ನೆಟ್ಟಿಗರು ಹೇಳುತ್ತಿದ್ದಾರೆ.
ಕೋವಿಡ್ ಸಮಯದಲ್ಲಿ ಮಾಡಿದಂತೆ ಈಗಲೂ ಮಾಡಿದರೆ ಬೆಂಗಳೂರಿನ ನೀರಿನ ಪರಿಸ್ಥಿತಿಗೆ ಸದ್ಯದ ಪರ್ಯಾಯ ನೀಡದಂತಾಗುತ್ತದೆ ಎಂದು ಹೇಳಲಾಗಿದೆ.