ಹೊಸದಿಗಂತ ಡಿಜಿಟಲ್ ಡೆಸ್ಕ್:
ನಮ್ಮ ರಾಜ್ಯದ ರೈತರನ್ನು ಉಳಿಸುವುದು ಮೊದಲ ಆದ್ಯತೆಯಾಗಿರಲಿ. ಕಾವೇರಿ, ಕಬಿನಿ ಅಚ್ಚುಕಟ್ಟು ಪ್ರದೇಶದ ಬೆಳೆಗಳಿಗೆ ಆದ್ಯತೆ ಮೇಲೆ ನೀರು ಹರಿಸಿ ಎಂದು ನೀರಾವರಿ ಇಲಾಖೆ ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಸೂಚಿಸಿದ್ದಾರೆ.
ನಿನ್ನೆಯಷ್ಟೇ ಕಾವೇರಿ ನೀರು ನಿಯಂತ್ರಣ ಸಮಿತಿ ಮುಂದಿನ 15 ದಿನ ತಮಿಳುನಾಡಿಗೆ ಐದು ಸಾವಿರ ಕ್ಯುಸೆಕ್ ನೀರು ಬಿಡುವಂತೆ ಸೂಚನೆ ನೀಡಿದೆ. ಈ ಹಿನ್ನೆಲೆಯಲ್ಲಿ ಸಿಎಂ ಸಭೆ ಕರೆದಿದ್ದು, ನಮ್ಮ ರೈತರನ್ನು, ಅವರ ಬೆಳೆಯನ್ನು ಉಳಿಸುವುದಕ್ಕೆ ಮೊದಲ ಆದ್ಯತೆ ನೀಡಿ ಎಂದು ಹೇಳಿದ್ದಾರೆ.
ನಮ್ಮ ರೈತರಿಗೆ ಅನ್ಯಾಯ ಮಾಡಿ ತಮಿಳುನಾಡಿಗೆ ನೀರು ಹರಿಸಿ ಎಂದು ಎಲ್ಲಿಯೂ ಹೇಳಿಲ್ಲ. ನಮ್ಮ ಬೆಳೆ, ಕುಡಿಯಲು ನೀರು ಇದನ್ನು ಮೊದಲು ಬಂದೋಬಸ್ತ್ ಮಾಡಿಕೊಳ್ಳೋಣ ಎಂದಿದ್ದಾರೆ. ನೀರಾವರಿ ಇಲಾಖೆ ಅಧಿಕಾರಿಗಳು ಇತರೆ ಇಲಾಖೆಗಳ ಜತೆ ಕೈಜೋಡಿಸಿ ಕೆಲಸ ಮಾಡಬೇಕು, ರೈತರಿಗೆ ನೀರನ್ನು ವಿವೇಚನಾಯುಕ್ತವಾಗಿ ಬಳಸುವ ಬಗ್ಗೆ ತಿಳಿವಳಿಕೆ ನೀಡಬೇಕು ಎಂದು ಹೇಳಿದ್ದಾರೆ.