ಹೊಸ ದಿಗಂತ ವರದಿ, ಹಾವೇರಿ :
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಶನಿವಾರ ಶಿಗ್ಗಾವಿಯಲ್ಲಿ ನಾಮಪತ್ರ ಸಲ್ಲಿಸಿದರು. ಈ ಸಂದರ್ಭದಲ್ಲಿ ಸಚಿವ ಸಿ.ಸಿ.ಪಾಟೀಲ, ಸಂಸದ ಶಿವಕುಮಾರ ಉದಾಸಿ ಮತ್ತಿತರರಿದ್ದರು.
ನಾಮ ಪತ್ರ ಸಲ್ಲಿಸುವುದಕ್ಕೂ ಪೂರ್ವದಲ್ಲಿ ಪಟ್ಟಣದ ದ್ಯಾಮವ್ವದ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದರು. ನಂತರ ಬಿ.ಆರ್.ಅಂಬೇಡ್ಕರ್ ಹಾಗೂ ಚನ್ನಮ್ಮನ ಪುತ್ಥಳೀಗೆ ಮಾಲಾರ್ಪಣೆ ಮಾಡಿ ತಹಶೀಲ್ದಾರ ಕಚೇರಿಗೆ ಆಗಮಿಸಿ ನಾಮ ಪತ್ರ ಸಲ್ಲಿಸಿದರು.