ರಾಜ್ಯಸಭೆಗೆ ನಾಮನಿರ್ದೇಶನ: ‘ಅಚ್ಚರಿಯ ಜೊತೆ ತುಂಬಾ ಸಂತೋಷವಾಗಿದೆ’ ಎಂದ ಡಾ. ಸುಧಾ ಮೂರ್ತಿ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯಂದು ರಾಜ್ಯಸಭೆಗೆ ನಾಮನಿರ್ದೇಶನಗೊಂಡಿರುವುದು ಅಚ್ಚರಿ ಮೂಡಿಸಿದೆ ಎಂದು ಇನ್ಫೊಸಿಸ್ ಪ್ರತಿಷ್ಠಾನದ ಅಧ್ಯಕ್ಷೆ ಡಾ. ಸುಧಾ ಮೂರ್ತಿ ಹೇಳಿದ್ದಾರೆ.

ನಾನು ಎಂದಿಗೂ ರಾಜ್ಯಸಭೆ ಸ್ಥಾನವನ್ನು ಬಯಸಿರಲಿಲ್ಲ. ಕೇಂದ್ರ ಸರ್ಕಾರವು ನನ್ನನ್ನು ನಾಮನಿರ್ದೇಶನ ಮಾಡಲು ಏಕೆ ಆಯ್ಕೆ ಮಾಡಿತು ಎಂಬುದರ ಬಗ್ಗೆ ಸಂಪೂರ್ಣವಾಗಿ ತಿಳಿದಿಲ್ಲ ಅವರು ತಿಳಿಸಿದ್ದಾರೆ.

ನಾಮನಿರ್ದೇಶನಗೊಂಡಿರುವುದು ಆಶ್ಚರ್ಯವನ್ನುಂಟು ಮಾಡಿದೆ. ಜೊತೆಗೆ ನನಗೆ ತುಂಬಾ ಸಂತೋಷವಾಗಿದೆ. ನಾನು ಪ್ರಧಾನಿ ಮೋದಿ ಅವರಿಗೆ ಕೃತಜ್ಞತೆ ಸಲ್ಲಿಸಲು ಬಯಸುತ್ತೇನೆ ಎಂದು ಪ್ರಸ್ತುತ ಥಾಯ್ಲೆಂಡ್ ಪ್ರವಾಸದಲ್ಲಿರುವ ಸುಧಾ ಮೂರ್ತಿ ಅವರು ತಿಳಿಸಿದ್ದಾರೆ.
ನನಗಿದು ಹೊಸ ಜವಾಬ್ದಾರಿ. ಅಲ್ಲಿ ನಾನೇನು ಮಾಡಬಲ್ಲೆ ಎಂಬುದನ್ನು ಅವಲಕೋಕಿಸಬೇಕಿದೆ. ಅಲ್ಲಿನ ಕೆಲಸ ಕಾರ್ಯಗಳ ಕುರಿತು ನಾನು ಮೊದಲು ಅಧ್ಯಯನ ನಡೆಸಬೇಕು. ನಂತರವಷ್ಟೇ ನಾನೇನು ಮಾಡಬಲ್ಲೆ ಎಂಬದು ಸ್ಪಷ್ಟವಾಗಲಿದೆ ಎಂದು ಹೇಳಿದ್ದಾರೆ.

ಸುಧಾಮೂರ್ತಿ ಅವರನ್ನು ಇಂದು ರಾಜ್ಯಸಭೆಗೆ ನಾಮನಿರ್ದೇಶನ ಮಾಡಲಾಗಿದೆ. ಈ ಕುರಿತಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಸಾಮಾಜಿಕ ಮಾಧ್ಯಮ ‘ಎಕ್ಸ್‌’ನಲ್ಲಿ ಪೋಸ್ಟ್‌ ಮಾಡಿ ಮಾಹಿತಿ ನೀಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!