ಕಾಂಗ್ರೆಸ್ ಅಭ್ಯರ್ಥಿಗಳ ನಾಮಪತ್ರ ರಿಜೆಕ್ಟ್, ಬಿಜೆಪಿಯದ್ದು ಅಕ್ಸೆಪ್ಟ್! ಡಿಕೆಶಿ ಗಂಭೀರ ಆರೋಪ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕಾಂಗ್ರೆಸ್ ಅಭ್ಯರ್ಥಿಗಳ ನಾಮಪತ್ರ ತಿರಸ್ಕಾರ ಮಾಡುವಂತೆ ಹಾಗೂ ಬಿಜೆಪಿ ಅಭ್ಯರ್ಥಿಗಳ ಅರ್ಜಿ ಸ್ವೀಕಾರ ಮಾಡುವಂತೆ ಸಿಎಂ ಕಚೇರಿಯಿಂದಲೇ ಸಾಕಷ್ಟು ಯತ್ನ ನಡೆದಿದೆ. ಈ ಬಗ್ಗೆ ಚುನಾವಣಾ ಆಯೋಗ ಕ್ರಮ ಕೈಗೊಳ್ಳಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.

ನಮ್ಮ ಅಭ್ಯರ್ಥಿಗಳ ನಾಮಪತ್ರ ತಿರಸ್ಕಾರ ಮಾಡುವ ಯತ್ನಗಳು ನಡೆಯುತ್ತಿವೆ. ಸಿಎಂ ಲೀಗಲ್ ಟೀಂನಿಂದ ಅಧಿಕಾರ ದುರ್ಬಳಕೆಯಾಗಿದೆ. ನಮ್ಮ ಅಭ್ಯರ್ಥಿಗಳ ಅಫಿಡವಿಟ್ ಡೌನ್‌ಲೋಡ್ ಆಗುತ್ತಿದೆ, ಇದಕ್ಕೆಲ್ಲ ಸಿಎಂ ಕಚೇರಿಯಿಂದ ಸೂಚನೆ ಬರುತ್ತಿದೆ. ಇದು ದೊಡ್ಡ ಷಡ್ಯಂತ್ರ, ನಮಗೆ ನ್ಯಾಯ ಬೇಕು. ಸವದತ್ತಿ ಯಲ್ಲಮ್ಮ ಕ್ಷೇತ್ರದ ಬಿಜೆಪಿ ಅಭ್ಯರ್ಥಿಗಳ ನಾಮಪತ್ರ ದೋಷಪೂರಿತವಾಗಿದೆ. ಆದರೆ ಸಿಎಂ ಕಚೇರಿಯ ಅಧಿಕಾರಿಗಳನ್ನು ಕರೆದು ಬದಲಾವಣೆಗೆ ಸೂಚಿಸಿದ್ದಾರೆ. ಇದಕ್ಕೆ ಮುಖ್ಯಮಂತ್ರಿಗಳೇ ಹೊಣೆ, ಅವರ ಫೋನ್ ಡೀಟೆಲ್ಸ್ ಪಡೆದು ಕ್ರಮ ಕೈಗೊಳ್ಳಬೇಕು ಎಂದಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!