ದೇಶದ ಬೆಳವಣಿಗೆಯಲ್ಲಿ ಕೊಡುಗೆ ನೀಡಲು ಈಶಾನ್ಯ ರಾಜ್ಯಗಳೂ ಸಮರ್ಥ: ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಇತಿಹಾಸದಲ್ಲೇ ಮೊದಲ ಬಾರಿಗೆ ಈಶಾನ್ಯ ರಾಜ್ಯಗಳ ಗಣಿಗಾರಿಕೆಯಲ್ಲಿ ಹೊಸ ಸಾಧ್ಯತೆಗಳನ್ನು ಕೇಂದ್ರ ಸಚಿವ ಪ್ರಲ್ಹಾದ ಜೋಶಿಯವರು ತೆರೆದಿಟ್ಟಿದ್ದಾರೆ.

ನಾಗಲ್ಯಾಂಡ್ ನ ದಿಮಾಪುರ್ ನಲ್ಲಿ ಇಂದು ಈಶಾನ್ಯ ಗಣಿಗಾರಿಕೆ ಸಮಾವೇಶ ಉದ್ದೇಶಿಸಿ ಮಾತನಾಡಿದ ಅವರು, ದೇಶದ ಬೆಳವಣಿಗೆಯಲ್ಲಿ ಈಶಾನ್ಯ ರಾಜ್ಯಗಳು ತಮ್ಮ ಕೊಡುಗೆ ನೀಡುವ ಸಾಮರ್ಥ್ಯ ಹೊಂದಿವೆ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಪ್ರಧಾನಮಂತ್ರಿ ಮೋದಿಯವರ ActEast ನೀತಿಯ ಅಡಿಯಲ್ಲಿ ಈಶಾನ್ಯ ರಾಜ್ಯಗಳು ಗಮನಾರ್ಹ ಕ್ರಮಗಳನ್ನು ತೆಗೆದುಕೊಂಡಿವೆ. ಎನ್‌ಇಆರ್‌ನಲ್ಲಿ ಖನಿಜ ಪರಿಶೋಧನೆಗೆ ಒತ್ತು ನೀಡಲಾಗಿದ್ದು, ಇದು ಪ್ರದೇಶದ ಆರ್ಥಿಕ ಅಭಿವೃದ್ಧಿಯನ್ನು ಮತ್ತಷ್ಟು ಹೆಚ್ಚಿಸುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಭಾರತದ ಉಕ್ಕಿನ ಮನುಷ್ಯ ಸರ್ದಾರ್ ವಲ್ಲಭಾಯಿ ಪಟೇಲ್ ಅವರು ಏಕ್ ಭಾರತ್ ಶ್ರೇಷ್ಠ ಭಾರತ್ ನಿರ್ಮಾಣಕ್ಕೆ ತಮ್ಮ ಜೀವನವನ್ನು ಮುಡಿಪಾಗಿಟ್ಟ ದಾರ್ಶನಿಕರಾಗಿದ್ದರು ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅಭಿಪ್ರಾಯಪಟ್ಟರು.

ನಾಗಾಲ್ಯಾಂಡ್‌ನ ದಿಮಾಪುರ್‌ನಲ್ಲಿರುವ ಜಿಎಸ್‌ಐ ಕಚೇರಿಗೆ ಭೇಟಿ ನೀಡಿದ ಅವರು, ಆ ಭಾಗದ ಪರಿಶೋಧನಾ ಚಟುವಟಿಕೆಗಳಿಗೆ ಕುರಿತಂತೆ ಅಧಿಕಾರಿಗಳೊಂದಿಗೆ ಸುಧೀರ್ಘ ಚರ್ಚೆ ನಡೆಸಿದರು. ಅಧಿಕಾರಿಗಳು ತೆಗೆದುಕೊಳ್ಳುತ್ತಿರುವ ಉಪಕ್ರಮಗಳನ್ನು ಖುದ್ದಾಗಿ ಪರಿಶೀಲಿಸಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!