ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಣಿಪುರದ ಕೆಲವು ಭಾಗಗಳಲ್ಲಿ ಘರ್ಷಣೆಯ ಹಿನ್ನೆಲೆಯಲ್ಲಿ, ಈಶಾನ್ಯ ರಾಜ್ಯದ ಕಾನೂನು ಮತ್ತು ಸುವ್ಯವಸ್ಥೆ ಪರಿಸ್ಥಿತಿಯನ್ನು ಪರಿಗಣಿಸಿ ಈಶಾನ್ಯ ಗಡಿ ರೈಲ್ವೆಯು ಮಣಿಪುರಕ್ಕೆ ಹೋಗುವ ಎಲ್ಲಾ ರೈಲುಗಳನ್ನು ರದ್ದುಗೊಳಿಸಿದೆ.
“ಪರಿಸ್ಥಿತಿ ಸುಧಾರಿಸುವವರೆಗೆ ಯಾವುದೇ ರೈಲುಗಳು ಮಣಿಪುರ ಪ್ರವೇಶಿಸುತ್ತಿಲ್ಲ. ಮಣಿಪುರ ಸರ್ಕಾರವು ರೈಲು ಸಂಚಾರವನ್ನು ನಿಲ್ಲಿಸಲು ಸಲಹೆ ನೀಡಿದ ನಂತರ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ” ಎಂದು ಈಶಾನ್ಯ ಫ್ರಾಂಟಿಯರ್ ರೈಲ್ವೆಯ ಮುಖ್ಯ ಸಾರ್ವಜನಿಕ ಸಂಪರ್ಕ ಅಧಿಕಾರಿ ತಿಳಿಸಿದ್ದಾರೆ.
ರಾಜ್ಯದಲ್ಲಿ ಹಿಂಸಾಚಾರದ ನಂತರ ಭಾರತೀಯ ರೈಲ್ವೆ ಮೇ 5 ಮತ್ತು ಮೇ 6 ರಂದು ನಾಲ್ಕು ರೈಲುಗಳ ಕಾರ್ಯಾಚರಣೆಯನ್ನು ರದ್ದುಗೊಳಿಸಿದೆ. “ಪ್ರಚಲಿತ ಕಾನೂನು ಮತ್ತು ಸುವ್ಯವಸ್ಥೆ ಪರಿಸ್ಥಿತಿಯಿಂದಾಗಿ ಮಣಿಪುರದಲ್ಲಿ ರೈಲು ಕಾರ್ಯಾಚರಣೆಯನ್ನು ನಿಲ್ಲಿಸಲು ಮಣಿಪುರ ರಾಜ್ಯದ ಅಧಿಕಾರಿಗಳು ಸಲಹೆ ನೀಡಿದ್ದಾರೆ. 4 ರೈಲುಗಳನ್ನು ರದ್ದುಗೊಳಿಸಲಾಗಿದ್ದು, ಈ ನಿರ್ಧಾರವನ್ನು ಮೇ 5 ಮತ್ತು 6ರಂದು ಮುಂದುವರಿಯಲಿದೆ” ಎಂದು ಎಂದು ರೈಲ್ವೆ ಹೇಳಿದೆ.
ಮಣಿಪುರದ ಹಲವಾರು ಜಿಲ್ಲೆಗಳಲ್ಲಿ ಬುಡಕಟ್ಟು ಗುಂಪುಗಳ ಹಿಂಸಾಚಾರವನ್ನು ತಡೆಯಲು ರಾಜ್ಯ ಸರ್ಕಾರವು ಐದು ದಿನಗಳ ಕಾಲ ಮೊಬೈಲ್ ಇಂಟರ್ನೆಟ್ ಅನ್ನು ಸ್ಥಗಿತಗೊಳಿಸಿದೆ.