Monday, January 12, 2026

ಎನ್‌ಡಿಎ ಸರ್ಕಾರದಿಂದ ಅಭಿವೃದ್ಧಿಯ ಎಂಜಿನ್‌ ಆಗಿ ಬದಲಾದ ಈಶಾನ್ಯ ಭಾರತ: ಪ್ರಧಾನಿ ಮೋದಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಭಾರತದ ಈಶಾನ್ಯ ಭಾಗ ಕಳೆದ 11 ವರ್ಷಗಳ ಎನ್‌ಡಿಎ ಸರ್ಕಾರದ ಆಡಳಿತದಿಂದ ಅಭಿವೃದ್ಧಿಯ ಎಂಜಿನ್ ಆಗಿ ಬದಲಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ಮೀಜೊರಾಂನಲ್ಲಿ 9 ಸಾವಿರ ಕೋಟಿ ರೂ. ಅಭಿವೃದ್ಧಿ ಯೋಜನೆಗಳ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿದ ಅವರು ,ಕೇಂದ್ರ ಸರ್ಕಾರದ ‘ಆ್ಯಕ್ಟ್ ಈಸ್ಟ್’ ಯೋಜನೆ ಮತ್ತು ಕಲಾದನ್ ಮಲ್ಟಿಮಾಡೆಲ್ ಯೋಜನೆ ಮೂಲಕ ಆಗ್ನೇಯ ಭಾರತದೊಂದಿಗೆ ಜೋಡಿಸುವ ಕೆಲಸದಲ್ಲಿ ಮೀಜೋರಾಂ ಪ್ರಮುಖ ಪಾತ್ರ ವಹಿಸಿದೆ. ಬೈರಾಬಿ-ಸಾಯ್‌ರಂಗ್ ಮಾರ್ಗಕ್ಕೆ ಚಾಲನೆ ನೀಡಲಾಗಿದೆ. ಈ ಮೂಲಕ ದೇಶದ ರೈಲ್ವೆ ನಕ್ಷೆಗೆ ಮೀಜೊರಾಂ ಸಂಪರ್ಕಗೊಂಡಿದೆ ಎಂದಿದ್ದಾರೆ.

ಈ ರೈಲ್ವೆ ಸಂಪರ್ಕದಿಂದ ಮೀಜೋರಾಂನ ಶಿಕ್ಷಣ, ಸಾಂಸ್ಕೃತಿಕ ಮತ್ತು ಆರ್ಥಿಕ ಅಭಿವೃದ್ಧಿ ಸಾಧ್ಯವಾಗಲಿದೆ. ರಾಜ್ಯದ ಪ್ರವಾಸೋದ್ಯಮ ಬೆಳೆಯಲಿದೆ. ಈ ಭಾಗದಲ್ಲಿ 4,500 ಸ್ಟಾರ್ಟ್‌ ಅಪ್‌ಗಳು ಆರಂಭಗೊಂಡಿವೆ. ಉದ್ಯೋಗವಕಾಶ ಹೆಚ್ಚಲಿದೆ. ಇನ್ನೂ ಹೊಸ ಜಿಎಸ್‌ಟಿಯಿಂದ ಈ ಭಾಗದ ಜನರ ಬದುಕು ಇನ್ನಷ್ಟು ಸುಧಾರಿಸಲಿದೆ. ಅಗತ್ಯ ಔಷಧಗಳು ಎಲ್ಲರಿಗೂ ತಲುಪಲಿದೆ. ವಾಹನಗಳ ಬೆಲೆ ಕಡಿಮೆಯಾಗಲಿದೆ ಎಂದು ಹೇಳಿದ್ದಾರೆ.

ಸರ್ಕಾರ ಈಗಾಗಲೇ ಮಿಜೋರಾಂನಲ್ಲಿ 11 ಎ-ಕ್ಲಬ್ ವಸತಿ ಶಾಲೆಗಳನ್ನು ಪ್ರಾರಂಭಿಸಿದೆ. ಇನ್ನೂ ಆರು ಶಾಲೆಗಳನ್ನು ಪ್ರಾರಂಭಿಸುವ ಕೆಲಸ ನಡೆಯುತ್ತಿದೆ. ನಮ್ಮ ಈಶಾನ್ಯವು ಸ್ಟಾರ್ಟ್‌ಅಪ್‌ಗಳಿಗೆ ಪ್ರಮುಖ ಕೇಂದ್ರವಾಗುತ್ತಿದೆ. ಈ ಪ್ರದೇಶದಲ್ಲಿ ಸುಮಾರು 4,500 ಸ್ಟಾರ್ಟ್‌ಅಪ್‌ಗಳು ಮತ್ತು 25 ಇನ್‌ಕ್ಯುಬೇಟರ್‌ಗಳು ಕಾರ್ಯನಿರ್ವಹಿಸುತ್ತಿರುವುದು ನನಗೆ ಸಂತೋಷ ತಂದಿದೆ. ಮಿಜೋರಾಂನ ಯುವಕರು ಈ ಆಂದೋಲನಕ್ಕೆ ಸಕ್ರಿಯವಾಗಿ ಸೇರುತ್ತಿದ್ದಾರೆ ಮತ್ತು ತಮಗಾಗಿ ಮತ್ತು ಇತರರಿಗೆ ಹೊಸ ಅವಕಾಶಗಳನ್ನು ಸೃಷ್ಟಿಸುತ್ತಿದ್ದಾರೆ. ಭಾರತವು ಜಾಗತಿಕ ಕ್ರೀಡೆಗಳಿಗೆ ತ್ವರಿತವಾಗಿ ಪ್ರಮುಖ ಕೇಂದ್ರವಾಗುತ್ತಿದೆ ಎಂದು ಅವರು ಹೇಳಿದರು.

ಇದು ದೇಶದಲ್ಲಿ ಕ್ರೀಡಾ ಆರ್ಥಿಕತೆಯನ್ನೂ ಸೃಷ್ಟಿಸುತ್ತಿದೆ. ಮಿಜೋರಾಂ ಫುಟ್ಬಾಲ್ ಮತ್ತು ಇತರ ಎಲ್ಲಾ ಕ್ರೀಡೆಗಳಲ್ಲಿ ಅನೇಕ ಚಾಂಪಿಯನ್‌ಗಳನ್ನು ಉತ್ಪಾದಿಸುವ ಅದ್ಭುತ ಸಂಪ್ರದಾಯವನ್ನು ಹೊಂದಿದೆ. ನಮ್ಮ ಕ್ರೀಡಾ ನೀತಿಗಳು ಮಿಜೋರಾಂಗೂ ಪ್ರಯೋಜನವನ್ನು ನೀಡುತ್ತಿವೆ. ಖೇಲೋ ಇಂಡಿಯಾ ಯೋಜನೆಯಡಿಯಲ್ಲಿ, ನಾವು ಆಧುನಿಕ ಕ್ರೀಡಾ ಮೂಲಸೌಕರ್ಯಗಳ ಸೃಷ್ಟಿಗೆ ಬೆಂಬಲ ನೀಡುತ್ತಿದ್ದೇವೆ. ಇತ್ತೀಚೆಗೆ, ನಮ್ಮ ಸರ್ಕಾರವು ಖೇಲೋ ಇಂಡಿಯಾ ಖೇಲ್ ನೀತಿ ಎಂಬ ರಾಷ್ಟ್ರೀಯ ಕ್ರೀಡಾ ನೀತಿಯನ್ನು ಸಹ ಹೊರತಂದಿದೆ . ಇದು ಮಿಜೋರಾಂನ ಯುವಕರಿಗೆ ಹೊಸ ಅವಕಾಶಗಳ ಬಾಗಿಲು ತೆರೆಯುತ್ತದೆ ಎಂದು ಅವರು ಹೇಳಿದರು.

Related articles

Comments

ಇತರರಿಗೂ ಹಂಚಿ

Latest articles

Newsletter

error: Content is protected !!