ಹೊಸ ದಿಗಂತ ವರದಿ, ವಿಜಯಪುರ:
ರಾಜ್ಯದಲ್ಲಿ ಬಿಜೆಪಿ ಪರ ಅಲೆಯಿದ್ದು, ರಾಜ್ಯದ ಮನೆ ಮನೆಯಲ್ಲೂ ಬಿಜೆಪಿಗೆ ಬೆಂಬಲ ಸಿಗುತ್ತಿದೆ ಎಂದು ಉನ್ನತ ಶಿಕ್ಷಣ ಸಚಿವ ಅಶ್ವತ್ಥ್ ನಾರಾಯಣ ಹೇಳಿದರು.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ವಾಯವ್ಯ ಪದವೀಧರ ಶಿಕ್ಷಕ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳು ಗೆಲ್ಲುತ್ತಾರೆ. ಪದವೀಧರ ಕ್ಷೇತ್ರದ ಅಭ್ಯರ್ಥಿ ಹನುಮಂತ ನಿರಾಣಿ, ಶಿಕ್ಷಕ ಕ್ಷೇತ್ರದ ಅರುಣ ಶಹಾಪುರ ಮತ್ತೆ ಆಯ್ಕೆಯಾಗುತ್ತಾರೆ ಎಂದರು.
ಬಿಜೆಪಿ ಸಂಪೂರ್ಣ ಬಲಿಷ್ಠವಾಗಿ ಬೆಳೆದಿದೆ. ಬೆಳಗಾವಿ ಯಾವಾಗಲೂ ಬಿಜೆಪಿಗೆ ಸಂಪೂರ್ಣ ಬೆಂಬಲ ಕೊಟ್ಟಿದೆ. ಬೆಳಗಾವಿ ಜಿಲ್ಲೆಯಲ್ಲಿ ಯಾವುದೇ ಸಮಸ್ಯೆಯಿಲ್ಲ. ಅತಿ ಹೆಚ್ಚಿನ ಸಂಖ್ಯೆಯಲ್ಲಿ ವಿಶೇಷವಾಗಿ ಬೆಳಗಾವಿಯಲ್ಲಿ ಬೆಂಬಲ ಸಿಗಲಿದೆ ಎಂದರು.