ಹೊಸದಿಗಂತ ಡಿಜಿಟಲ್ ಡೆಸ್ಕ್:
ಕರ್ನಾಟಕದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದು ಒಂದು ವರ್ಷವೂ ಕಳೆದಿಲ್ಲ ಈಗಾಗಲೇ ಹಿಂದೂಗಳ ಮೇಲೆ ಹಲ್ಲೆ ಮತ್ತು ಹತ್ಯೆಗಳು ನಡೆಯುತ್ತಿವೆ. ದೇಶದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಹೊಡೆದಾಡುವ ಪರಿಸ್ಥಿತಿ ನಿರ್ಮಾವಾಗುತ್ತದೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಕಿಡಿಕಾರಿದ್ದಾರೆ.
ಬೀದರ್ ನಲ್ಲಿ ಮಾತನಾಡುತ್ತಿದ್ದ ಯತ್ನಾಳ್ ಕಲಬುರಗಿಯಲ್ಲಿ ಜೈ ಶ್ರೀ ರಾಮ್ ಎಂದು ಘೋಷಣೆ ಕೂಗಿದ್ದಕ್ಕೆ ಹಲ್ಲೆ ನಡೆಸಿದ್ದಾರೆ. ದೇಶದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮನೆ ಹೆಣ್ಣು ಮಕ್ಕಳನ್ನೂ ಹೊತ್ತುಕೊಂಡು ಹೋಗುತ್ತಾರೆ.
ಈ ಪ್ರಕರಣವನ್ನು ಮುಚ್ಚಿ ಹಾಕಲು ಪ್ರಿಯಾಂಕ್ ಖರ್ಗೆ ಯತ್ನಿಸುತ್ತಿದ್ದಾರೆ. ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಅವರು, ರಾಜ್ಯದಲ್ಲಿ ಕಾಂಗ್ರೆಸ್ ಮತ್ತು ಪಾಕಿಸ್ತಾನ ಸರ್ಕಾರವಿದೆ ಎಂದು ತಿಳಿಸಿದ್ದಾರೆ.