VIRAL | ಕನ್ನಡ ಮಾತಾಡೋದಿಲ್ಲ ಅಂದ್ರೆ ಮಾತಾಡೋದಿಲ್ಲ ಅಷ್ಟೆ! ಬ್ಯಾಂಕ್‌ ಮ್ಯಾನೇಜರ್‌ ದರ್ಪದ ಮಾತು

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಬೆಂಗಳೂರಿನ ಆನೇಕಲ್ ತಾಲೂಕಿನ ಚಂದಾಪುರದ ಸೂರ್ಯನಗರದಲ್ಲಿನ ಎಸ್​ಬಿಐ ಬ್ಯಾಂಕ್​​ ಮ್ಯಾನೇಜರ್​ ಚಳವಳಿಗಾರರೊಬ್ಬರಿಗೆ ಕನ್ನಡ ಮಾತನಾಡುವುದೇ ಇಲ್ಲ ಎಂದು ಪಟ್ಟು ಹಿಡಿದ ವಿಡಿಯೋ ವೈರಲ್‌ ಆಗಿದೆ. ಸಾಮಾಜಿಕ ಜಾಲತಾಣದಲ್ಲಿ ಕನ್ನಡಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಎಂದಿನಂತೆ ಕನ್ನಡ ಮಾತನಾಡದ ಮಹಿಳಾ ಮ್ಯಾನೇಜರ್​ ಕೇವಲ ಇಂಗ್ಲಿಷ್​​ , ಹಿಂದಿಯಲ್ಲಿಯೇ ಪ್ರತಿಕ್ರಿಯಿಸುತ್ತಿರುವುದನ್ನು ಮೊಬೈಲ್ ಮೂಲಕ ದೃಶ್ಯ ಸೆರೆ ಮಾಡುತ್ತಲೇ, ತಮ್ಮ ಖಾತೆಯಲ್ಲಿ ಹರಿಬಿಟ್ಟ ಸ್ಥಳೀಯ ಮಹೇಶ್ ರೆಡ್ಡಿ ಎಂಬುವರು ‘ಕನ್ನಡ ಮಾತನಾಡಲೇ ಬೇಕು. ಅದು ಆರ್​ಬಿಐ ನಿಯಮ’ ಎಂದು ಪಟ್ಟು ಹಿಡಿದರು.

ಈ ವೇಳೆ ಮ್ಯಾನೇಜರ್​ ಸವಾಲು ಹಾಕುತ್ತಲೇ ‘ಆರ್​ಬಿಐ ನಲ್ಲಿ ಗೈಡ್ಲೈನ್ಸ್ ಎಲ್ಲಿದೆ. ಕನ್ನಡ ಮಾತನಾಡಬೇಕು ಎಂಬ ಮ್ಯಾಂಡೇಟರಿ ಏನಿಲ್ಲ. ನಾನು ಕನ್ನಡ ಮಾತನಾಡುವುದಿಲ್ಲ ‘ ಎಂದು ಅವರೂ ಕೂಡಾ ವಿಡಿಯೋ ಮಾಡಿಕೊಂಡಿದ್ದಾರೆ.

ವಿಡಿಯೋ ವೈರಲಾಗುತ್ತಿದ್ದಂತೆಯೇ ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಆನೇಕಲ್ ಸುತ್ತಲಿನ ಎಲ್ಲ ಖಾಸಗಿ ಬ್ಯಾಂಕ್​ಗಳಲ್ಲಿ ಪರಭಾಷಿಗರೇ ಕಾಣುತ್ತಿದ್ದು, ಸ್ಥಳೀಯರಿಗೆ ಬ್ಯಾಂಕ್​​ ಸೇವೆಗಳ ಸಮಗ್ರ ಮಾಹಿತಿ ದೊರೆಯದೇ ಪರದಾಡುತ್ತಿರುವ, ಬೆನ್ನಲ್ಲೇ ಆಗಾಗ ಇಂತಹ ಘಟನೆಗಳು ಮರುಕಳಿಸುತಿವೆ ಎಂಬ ಕೂಗು ಜೋರಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!