ಹೊಸದಿಗಂತ ಡಿಜಿಟಲ್ ಡೆಸ್ಕ್:
ನಮ್ಮೂರಲ್ಲಿ ನೀರಿಲ್ಲ, ಮಳೆ ಬಂದು ತುಂಬಾ ದಿನಗಳಾಯ್ತು. ಬೇರೇನೂ ಬೇಡ ಕುಡಿಯುವ ನೀರು ಕೊಡಿ ಸರ್ ಎಂದು ಮಕ್ಕಳು ಪತ್ರ ಬರೆದ ಘಟನೆ ನಡೆದಿದೆ.
ತಂದೆ-ತಾಯಿ ನೀರಿಲ್ಲದೇ ದೂರ ಹೋಗಿ ಕೆಲಸ ಮಾಡ್ತಾರೆ. ಪ್ರಾಣಿ ಪಕ್ಷಿಗಳಿಗೂ ಕುಡಿಯುವ ನೀರು ಸಿಗ್ತಿಲ್ಲ ಎಂದು ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ರಾಮಾಪುರ ಗ್ರಾ.ಪಂ. ವ್ಯಾಪ್ತಿಯ ಕೆಂಪಯ್ಯನಹಟ್ಟಿ ಗ್ರಾಮದ ವಿದ್ಯಾರ್ಥಿನಿ ವರ್ಣಿಕಾ ಪತ್ರ ಬರೆದು ಅಳಲು ತೋಡಿಕೊಂಡಿದ್ದಾರೆ.
ರಾಜ್ಯದಲ್ಲೆಡೆ ಬಹುತೇಕ ಜಲಾಶಯಗಳು ಭರ್ತಿಯಾಗಿವೆ. ಆದರೆ, ಚಾಮರಾಜನಗರ ಜಿಲ್ಲೆಯ ರಾಮಾಪುರ ಹೋಬಳಿಯಲ್ಲಿ ಕುಡಿಯುವ ನೀರಿಗೆ ಹಾಹಾಕಾರ ಶುರುವಾಗಿದೆ. ಮಳೆ ಕೊರತೆಯಿಂದ ಅಂತರ್ಜಲ ಕುಸಿತವಾಗಿದೆ. ಕೃಷಿ ಬಿಟ್ಟು ವಲಸೆ ಹೋಗಬೇಕಾದ ಪರಿಸ್ಥಿತಿ ಬಂದಿದೆ ಎಂದು ತಂದೆ-ತಾಯಿಗಳ ಪರಿಸ್ಥಿತಿಗೆ ಮನನೊಂದು ಸಿಎಂಗೆ ಮಕ್ಕಳು ಪತ್ರ ಬರೆದಿದ್ದಾರೆ.
ಇದಕ್ಕೆ ಸಿಎಂ ಇಂದ ರಿಪ್ಲೇ ಬರುತ್ತದಾ? ಊರಿಗೆ ಕುಡಿಯುವ ನೀರಿನ ವ್ಯವಸ್ಥೆಯಾಗಲಿದ್ಯಾ? ಕಾದು ನೋಡಬೇಕಿದೆ..