ಏನೂ ಬದಲಾಗೋದಿಲ್ಲ, ಐದು ವರ್ಷ ನಮ್ಮದೇ ಸರ್ಕಾರ: ಸತೀಶ ಜಾರಕಿಹೊಳಿ

ದಿಗಂತ ವರದಿ ವಿಜಯಪುರ:

ರಾಜ್ಯದಲ್ಲಿ ಯಾವ ಕಾರಣಕ್ಕೂ ಕಾಂಗ್ರೆಸ್ ಸರ್ಕಾರ ಬದಲಾಗಲ್ಲ, ಐದು ವರ್ಷಗಳ ಕಾಲ ಪೂರ್ಣ ಪ್ರಮಾಣದಲ್ಲಿ ಅಸ್ತಿತ್ವದಲ್ಲಿ ಇರುತ್ತದೆ, ಮುಂದೆಯೂ ಇರುತ್ತದೆ ಎಂದು ಸಚಿವ ಸತೀಶ ಜಾರಕಿಹೊಳಿ ಹೇಳಿದರು.

ಮಹಾರಾಷ್ಟ್ರ ಮಾದರಿಯಲ್ಲಿ ಸರ್ಕಾರ ಬದಲಾವಣೆ ಆಗುತ್ತದೆ ಎಂದ ಸಚಿವ ರಮೇಶ ಜಾರಕಿಹೊಳಿ ಅವರ ಹೇಳಿಕೆ ಕುರಿತು ಜಿಲ್ಲೆಯಲ್ಲಿ ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ ಅವರು, ಸದ್ಯದಲ್ಲೇ ಡಿಕೆಶಿ ಮಾಜಿ ಮಂತ್ರಿ ಆಗ್ತಾರೆ ಎನ್ನುವ ಹೇಳಿಕೆಗೂ ಪ್ರತಿಕ್ರಿಯೆ ನೀಡಿದ ಅವರು, ಆ ಬಗ್ಗೆ ನನಗೆ ಗೊತ್ತಿಲ್ಲ, ಕಾದು ನೋಡೋಣ ಎಂದಷ್ಟೇ ಉತ್ತರಿಸಿದರು.

ಸಿಡಿ ವಿಚಾರದಲ್ಲಿ ಡಿಕೆಶಿ ವಿರುದ್ಧ ಸಿಬಿಐಗೆ ದೂರು ಕೊಡುವ ಮಾಜಿ ಸಚಿವ ರಮೇಶ ಜಾರಕಿಹೊಳಿ ಅವರಿಗೆ ಪ್ರತಿಕ್ರಿಯೆ ನೀಡಿ, ಅದು ಅವರಿಗೆ ಸಂಬಂಧಿಸಿದ್ದು, ಸಿಡಿ ಬಗ್ಗೆ ನಮಗೆ ಗೊತ್ತಿಲ್ಲ ಎಂದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!