ಹೊಸದಿಗಂತ ವರದಿ ಮೈಸೂರು:
ಒಂದು ವರ್ಷ ಅಧಿಕಾರ ಪೂರೈಸಿದ ನಿಗಮ, ಮಂಡಳಿ ಗಳ ಅಧ್ಯಕ್ಷ ರ ರಾಜೀನಾಮೆಗೆ ಸೂಚನೆ ನೀಡಲು ಸೂಚಿಸಲಾಗಿದೆ ಎಂದು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಮಂಗಳವಾರ ಮೈಸೂರಿನ ಮಂಡಕಳ್ಳಿ ವಿಮಾನ ನಿಲ್ದಾಣದ ಲ್ಲಿ ಸುದ್ದಿ ಗಾರರೊಂದಿಗೆ ಮಾತನಾಡಿದ ಅವರು ಪಕ್ಷದ ಕೋರ್ ಕಮಿಟಿ ತೀರ್ಮಾನ ದಂತೆ ಒಂದು ವರ್ಷ ಅಧಿಕಾರ ಪೂರೈಸಿದ ನಿಗಮ ಮಂಡಳಿ ಗಳ ಅಧ್ಯಕ್ಷ ರನ್ನು ತೆಗೆದು, ಹೊಸಬರಿಗೆ ಅವಕಾಶ ಮಾಡಿಕೊಡಬೇಕಾಗಿದೆ. ಹಾಗಾಗಿ ಒಂದು ವರ್ಷ ಅಧಿಕಾರ ಪೂರೈಸಿದ ಅಧ್ಯಕ್ಷ ರ ಹೆಸರನ್ನು ಪಟ್ಟಿ ಮಾಡಲಾಗಿದೆ. ಅವರಿಗೆ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಲು ಸೂಚನೆ ನೀಡಲಾಗುತ್ತಿದೆ ಎಂದು ಹೇಳಿದರು.
ರಾಜ್ಯದ ಲ್ಲಿ ಸುರಿಯುತ್ತಿರುವ ಮಳೆಯಿಂದಾಗಿ ಕೆಲವು ಜಿಲ್ಲೆ ಗಳಲ್ಲಿ ಪ್ರವಾಹ ಪರಿಸ್ಥಿತಿ ಯಿಂದಾಗಿ ಅಪಾರ ಪ್ರಮಾಣದ ನಷ್ಟ ವುಂಟಾಗಿದೆ.ಕೊಡಗಿನಲ್ಲಿ ಭೂಕಂಪ, ಭೂಕುಸಿತ ವಾಗಿದೆ.ಎಲ್ಲೆಲ್ಲಿ ಏನೆಲ್ಲಾ ನಷ್ಟವಾಗಿದೆ ಎಂಬುದರ ಕುರಿತು ಇಂದು ಸಂಜೆಯೊಳಗೆ ವರದಿ ಸಿಗಲಿದೆ. ಬಳಿಕ ಕೇಂದ್ರ ಸರ್ಕಾರಕ್ಕೆ ವರದಿ ಸಲ್ಲಿಸಿ ಪರಿಹಾರ ಕೇಳಲಾಗುತ್ತದೆ ಎಂದು ತಿಳಿಸಿದರು. ಮಳೆ ಪರಿಹಾರ ಕ್ರಮ ಕೈಗೊಳ್ಳಲು ರಾಷ್ಟ್ರೀಯ ವಿಪತ್ತು ನಿಧಿಯಲ್ಲಿ ಸದ್ಯ 739 ಕೋಟಿ ರೂ ಇದೆ. ಹಾಗಾಗಿ ಸದ್ಯದ ಪರಿಸ್ಥಿತಿಯಲ್ಲಿ ಹಣದ ಕೊರತೆಯಿಲ್ಲ, ಸರ್ಕಾರ ಸಂಕಷ್ಟ ದಲ್ಲಿರುವ ಜನರ ನೆರವಿಗೆ ನಿಲ್ಲಲ್ಲಿದೆ. ಜಿಲ್ಲಾ ಉಸ್ತುವಾರಿ ಸಚಿವರುಗಳು ಪ್ರವಾಹ, ಮಳೆ ಹಾನಿ ಪರಿಸ್ಥಿತಿ ಯನ್ನು ನೋಡಿ ಕೊಳ್ಳುತ್ತಿದ್ದಾರೆ. ಈ ಬಗ್ಗೆ ವಿಪಕ್ಷದವರು ಮಾಡುತ್ತಿರುವ ಆರೋಪದಲ್ಲಿ ಹುರುಳಿಲ್ಲ ಎಂದರು.