January21, 2026
Wednesday, January 21, 2026
spot_img

ಬಡಾವಣೆ ಹಿತದೃಷ್ಟಿಯಿಂದ ನೋಟಿಸ್: ಸ್ಥಳೀಯರಿಗೆ ಪರಿಹಾರದ ಪ್ಯಾಕೇಜ್ ಘೋಷಿಸಿದ ಡಿಸಿಎಂ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಬೆಂಗಳೂರು ನಗರದ ಅಭಿವೃದ್ಧಿ ಮತ್ತು ಆಡಳಿತಾತ್ಮಕ ವಿಷಯಗಳ ಕುರಿತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಮಾಧ್ಯಮಗಳೊಂದಿಗೆ ಮಹತ್ವದ ಮಾಹಿತಿ ಹಂಚಿಕೊಂಡಿದ್ದಾರೆ.

ನಗರದ ನಿರ್ದಿಷ್ಟ ಪ್ರದೇಶವೊಂದರಲ್ಲಿ ನಿಯಮಬಾಹಿರವಾಗಿ ಶೆಡ್ ನಿರ್ಮಿಸಿರುವ ಕುರಿತು ಪ್ರತಿಕ್ರಿಯಿಸಿದ ಅವರು, “ಅಕ್ರಮವಾಗಿ ಹಣ ಪಡೆದು ಶೆಡ್ ನಿರ್ಮಿಸಿರುವುದು ಗಮನಕ್ಕೆ ಬಂದಿದೆ. ಈ ಸಂಬಂಧ ಈಗಾಗಲೇ ಕಠಿಣ ತೀರ್ಮಾನ ಕೈಗೊಂಡು ನೋಟಿಸ್ ಜಾರಿ ಮಾಡಿದ್ದೇವೆ. ಒಂದು ವೇಳೆ ಅಲ್ಲಿರುವವರು ಸ್ಥಳೀಯ ನಿವಾಸಿಗಳಾಗಿದ್ದರೆ ಅವರಿಗೆ ಅನ್ಯಾಯವಾಗದಂತೆ ನೋಡಿಕೊಳ್ಳುತ್ತೇವೆ. ರಾಜೀವ್ ಗಾಂಧಿ ಹೌಸಿಂಗ್ ಸ್ಕೀಮ್ ಅಡಿಯಲ್ಲಿ ಅವರಿಗೆ ಸೂಕ್ತ ಪರಿಹಾರ ಒದಗಿಸುವ ಬಗ್ಗೆ ಗಂಭೀರ ಚರ್ಚೆ ನಡೆಯುತ್ತಿದೆ,” ಎಂದು ತಿಳಿಸಿದರು.

ಇದೇ ವೇಳೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಅವರು ರಾಜ್ಯ ಸರ್ಕಾರದ ಆಡಳಿತದಲ್ಲಿ ಹಸ್ತಕ್ಷೇಪ ಮಾಡುತ್ತಿದ್ದಾರೆ ಎಂಬ ಟೀಕೆಗಳಿಗೆ ತಿರುಗೇಟು ನೀಡಿದ ಡಿಕೆಶಿ, “ವೇಣುಗೋಪಾಲ್ ಅವರು ಪಕ್ಷದ ಹಿರಿಯ ನಾಯಕರು. ಅವರಿಗೆ ಸಲಹೆ ನೀಡುವ ಎಲ್ಲಾ ಅಧಿಕಾರವಿದೆ. ಅವರ ಅನುಭವದ ಆಧಾರದ ಮೇಲೆ ನಾವು ಸಲಹೆಗಳನ್ನು ಪಡೆದುಕೊಳ್ಳುತ್ತೇವೆಯೇ ಹೊರತು, ಅವರು ನಮ್ಮ ಆಡಳಿತದಲ್ಲಿ ಯಾವುದೇ ರೀತಿಯ ಹಸ್ತಕ್ಷೇಪ ಮಾಡುತ್ತಿಲ್ಲ,” ಎಂದು ಸ್ಪಷ್ಟಪಡಿಸಿದರು.

Must Read