ಪೌರತ್ವ ತಿದ್ದುಪಡಿ ಕಾಯ್ದೆ ಜಾರಿಗೆ ಅಧಿಸೂಚನೆ: ದೆಹಲಿ, ಅಸ್ಸಾಂ ರಾಜ್ಯದಲ್ಲಿ ಬಿಗಿ ಭದ್ರತೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕೇಂದ್ರ ಸರ್ಕಾರವು ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ಜಾರಿಗೆ ಅಧಿಸೂಚನೆ ಹೊರಡಿಸಿದೆ. ಈ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಬಿಗಿ ಭದ್ರತೆ ಜಾರಿಗೊಳಿಸಲಾಗಿದೆ.

ಶಾಹೀನ್‌ ಭಾಗ್, ಜಾಮಿಯಾ ಸೇರಿದಂತೆ ಸೂಕ್ಷ್ಮ ಪ್ರದೇಶಗಳಲ್ಲಿ ಪೊಲೀಸ್‌ ಮತ್ತು ಅರೆಸೇನಾ ಪಡೆಯನ್ನು ನಿಯೋಜಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಸಿಎಎ ಜಾರಿ ವಿಷಯವಾಗಿ 2020ರಲ್ಲಿ ದೆಹಲಿ ಸಮುದಾಯಗಳ ಘರ್ಷಣೆಗೆ ಸಾಕ್ಷಿಯಾಗಿತ್ತು. ಹೀಗಾಗಿ ದೆಹಲಿಯ ಪ್ರತಿಯೊಬ್ಬ ವ್ಯಕ್ತಿಯ ಜೀವವೂ ನಮಗೆ ಮುಖ್ಯ ಎಂದು ಈಶಾನ್ಯ ದೆಹಲಿಯ ಡಿಸಿಪಿ ಜಾಯ್‌ ಟಿರ್ಕಿ ತಿಳಿಸಿದ್ದಾರೆ.

ಅಸ್ಸಾಂ ರಾಜ್ಯದಲ್ಲಿ ಬಿಗಿ ಪೊಲೀಸ್‌ ಬಂದೋಬಸ್ತ್‌
ಅಧಿಸೂಚನೆ ಹೊರಬೀಳುತ್ತಿದ್ದಂತೆ ಅಸ್ಸಾಂ ರಾಜ್ಯದಲ್ಲಿ ಬಿಗಿ ಪೊಲೀಸ್‌ ಬಂದೋಬಸ್ತ್‌ ಕೈಗೊಳ್ಳಲಾಗಿದೆ. ಅಹಿತಕರ, ಶಾಂತಿ ಕದಡುವ ಘಟನೆಗಳು ನಡೆಯದಂತೆ ನಿಗಾವಹಿಸಲು ಗುವಾಹಟಿ ಸೇರಿ ಪ್ರಮುಖ ಪ್ರದೇಶಗಳಲ್ಲಿ ಪೊಲೀಸರು ಕಣ್ಗಾವಲು ಇರಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!