ಮಹಿಳಾ ವೈದ್ಯರ ನೈಟ್ ಶಿಫ್ಟ್ ನಿಲ್ಲಿಸುವ ಅಧಿಸೂಚನೆ: ಬಂಗಾಳ ಸರಕಾರಕ್ಕೆ ಸುಪ್ರೀಂ ಕೋರ್ಟ್‌ ಕ್ಲಾಸ್!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಪಶ್ಚಿಮ ಬಂಗಾಳ ಹೊರಡಿಸಿದ ಸರ್ಕಾರಿ ಆಸ್ಪತ್ರೆಗಳಲ್ಲಿ ಮಹಿಳಾ ವೈದ್ಯರಿಗೆ ರಾತ್ರಿ ಪಾಳಿ ನೀಡುವುದನ್ನು ನಿಲ್ಲಿಸುವ ಅಧಿಸೂಚನೆಯನ್ನು ಭಾರತದ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಕಟುವಾಗಿ ಟೀಕಿಸಿದ್ದಾರೆ. ಅಲ್ಲದೇ ರಾತ್ರಿ ಪಾಳಿಯಲ್ಲಿ ಕಾರ್ಯನಿರ್ವಹಿಸುವ ಮಹಿಳಾ ವೈದ್ಯರಿಗೆ ಭದ್ರತೆ ಒದಗಿಸುವುದು ರಾಜ್ಯ ಸರ್ಕಾರದ ಕರ್ತವ್ಯ ಎಂದು ಚಾಟಿ ಬೀಸಿದ್ದಾರೆ.

ಕೋಲ್ಕತ್ತಾದ ಆರ್‌ಜಿ ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಟ್ರೈನಿ ವೈದ್ಯೆಯ ಅತ್ಯಾಚಾರ ಮತ್ತು ಕೊಲೆ ಆದ ಬಳಿಕ ಹೊರಡಿಸಲಾಗಿದ್ದ ಅಧಿಸೂಚನೆಯನ್ನು ತಿದ್ದುಪಡಿ ಮಾಡಲು ಬಂಗಾಳ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ ನಿರ್ದೇಶಿಸಿಸಿದೆ.

ಮಹಿಳೆಯರು ರಾತ್ರಿ ಪಾಳಿಯಲ್ಲಿ ಕೆಲಸ ಮಾಡಲು ಸಾಧ್ಯವಿಲ್ಲ ಎಂದು ನೀವು ಹೇಗೆ ಹೇಳುತ್ತೀರಿ? ಅವರು ರಿಯಾಯಿತಿಯನ್ನು ಬಯಸುವುದಿಲ್ಲ. ಅದಕ್ಕೆ ಪರಿಹಾರವೆಂದರೆ, ನೀವು ಭದ್ರತೆಯನ್ನು ನೀಡಬೇಕು. ಪಶ್ಚಿಮ ಬಂಗಾಳ ಅಧಿಸೂಚನೆಯನ್ನು ಸರಿಪಡಿಸಬೇಕು. ಭದ್ರತೆ ಒದಗಿಸುವುದು ನಿಮ್ಮ ಕರ್ತವ್ಯ, ಮಹಿಳೆಯರು ರಾತ್ರಿ ಪಾಳಿಯಲ್ಲಿ ಕೆಲಸ ಮಾಡಲು ಸಾಧ್ಯವಿಲ್ಲ ಎಂದು ನೀವು ಹೇಳಲಾಗುವುದಿಲ್ಲ. ಮಹಿಳೆಯರು ಪೈಲಟ್‍ಗಳಾಗಿ, ಸೇನೆಯಲ್ಲಿ ರಾತ್ರಿ ಕೆಲಸ ಮಾಡುತ್ತಾರೆ ಎಂಬುದನ್ನು ನೀವು ಗಮನಿಸಬೇಕು ಎಂದು ಸರ್ಕಾರದ ಪರ ವಾದ ಮಂಡಿಸಿದ ವಕೀಲ ಸಿಬಲ್ ಅವರಿಗೆ ಸಿಜೆಐ ಸೂಚಿಸಿದರು.

ವೈದ್ಯೆಯ ಅತ್ಯಾಚಾರ ಮತ್ತು ಹತ್ಯೆಗೆ ಸಂಬಂಧಿಸಿದಂತೆ ಪೀಠವು ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಂಡು ವಿಚಾರಣೆ ನಡೆಸುತ್ತಿದೆ. ಪ್ರಸ್ತುತ ಕೇಂದ್ರೀಯ ತನಿಖಾ ದಳ (ಸಿಬಿಐ) ಪ್ರಕರಣದ ತನಿಖೆ ನಡೆಸುತ್ತಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!