ಹೊಸದಿಗಂತ ಡಿಜಿಟಲ್ ಡೆಸ್ಕ್ :
ಪ್ರಧಾನಿ ನರೇಂದ್ರ ಮೋದಿ (Narendra Modi) ವಿರುದ್ಧ ಅಕ್ಷೇಪಾರ್ಹ ಹೇಳಿಕೆ ನೀಡಿದ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕ ಪವನ್ ಖೇರಾ (Pawan Khera) ವಿರುದ್ಧದ ದಾಖಲಾದ ಮೂರು ಎಫ್ಐಆರ್ಗಳನ್ನು ಒಟ್ಟಿಗೆ ಸೇರಿಸಿ ಒಂದೇ ಸ್ಥಳಕ್ಕೆ ವರ್ಗಾಯಿಸುವಂತೆ ಮಾಡಿದ ಮನವಿಯನ್ನು ಅಸ್ಸಾಂ ಸರ್ಕಾರ ಶುಕ್ರವಾರ ಸುಪ್ರೀಂಕೋರ್ಟ್ನಲ್ಲಿ (Supreme Court) ವಿರೋಧಿಸಿದೆ.
ಇದೇ ವೇಳೆ ಖೇರಾ ಅವರಿಗೆ ನೀಡಲಾಗಿದ್ದ ಮಧ್ಯಂತರ ಜಾಮೀನನ್ನು ಮಾರ್ಚ್ 17ರವರೆಗೂ ಸುಪ್ರೀಂಕೋರ್ಟ್ ವಿಸ್ತರಿಸಿದೆ.
ಅಸ್ಸಾಂ ಸರ್ಕಾರವು ಪ್ರಧಾನಿ ಮೋದಿ ವಿರುದ್ಧ ಖೇರಾ ಅವರ ಹೇಳಿಕೆಯು ಭಾರತವನ್ನು ಅಸ್ಥಿರಗೊಳಿಸುವ ಮತ್ತು ಮಾನನಷ್ಟಗೊಳಿಸುವ ವ್ಯಾಪಕ ಪಿತೂರಿಯ ಒಂದು ಭಾಗವಾಗಿದೆ ಎಂದು ಹೇಳಿಕೊಂಡಿದೆಖೇರಾ ಇನ್ನೂ ಕ್ಷಮೆಯಾಚಿಸಿಲ್ಲ ಎಂದಿದೆ.
ಉತ್ತರ ಪ್ರದೇಶ ಸರ್ಕಾರ ಕೂಡಾ ಪವನ್ ಖೇರಾ ಅವರ ಮನವಿಯನ್ನು ವಜಾಗೊಳಿಸುವಂತೆ ಕೋರಿದೆ.
ಫೆಬ್ರವರಿ 23 ರಂದು, ಖೇರಾ ಅವರನ್ನು ದೆಹಲಿಯಲ್ಲಿ ರಾಯ್ಪುರಕ್ಕೆ ಹೋಗುವ ಇಂಡಿಗೋ ವಿಮಾನವನ್ನು ಕೆಳಗಿಳಿಸಿದ ಘಟನೆಯೂ ನಡೆದಿತ್ತು. ಈಶಾನ್ಯ ರಾಜ್ಯದಲ್ಲಿ ಎಫ್ಐಆರ್ ದಾಖಲಿಸಿದ ನಂತರ ಅಸ್ಸಾಂ ಪೊಲೀಸರು ಅವರನ್ನು ಬಂಧಿಸುವ ಮೊದಲು ದೆಹಲಿ ಪೊಲೀಸ್ ತಂಡವು ಅವರನ್ನು ಬಂಧಿಸಿತು. ಅವರು ಸುಪ್ರೀಂ ಕೋರ್ಟ್ಗೆ ಮೊರೆ ಹೋಗಿದ್ದು, ಅದು ಇಂದಿನವರೆಗೆ ಬಂಧನದಿಂದ ಮಧ್ಯಂತರ ಪರಿಹಾರವನ್ನು ನೀಡಿತ್ತು. ಇದೀಗ ಸುಪ್ರೀಂಕೋರ್ಟ್ ಮಧ್ಯಂತರ ಜಾಮೀನನ್ನು ಮಾರ್ಚ್ 17ರವರೆಗೆ ವಿಸ್ತರಿಸಿದೆ.