ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೆಂಗಳೂರಿನ ಪೂರ್ವ ತಾಲೂಕಿನ ಹಿರಂಡಹಳ್ಳಿ ಗ್ರಾಮದಲ್ಲಿರುವ ಶ್ರೀರಾಮ ಮಂದಿರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೋಮವಾರ ಉದ್ಘಾಟಿಸಿದರು.
ಸಿಎಂ ಸಿದ್ದರಾಮಯ್ಯ ಪೋಸ್ಟ್ ಹಂಚಿಕೊಂಡಿದ್ದು, ಬಿದರಹಳ್ಳಿ ಹೋಬಳಿಯ ಹಿರಂಡಹಳ್ಳಿ ಶ್ರೀರಾಮ ಟೆಂಪಲ್ ಟ್ರಸ್ಟ್ ನಿರ್ಮಿಸಿರುವ ‘ಸಕುಟುಂಬ ಸಮೇತನಾಗಿರುವ ಸೀತಾರಾಮ ಲಕ್ಷ್ಮಣ ದೇವಾಲಯ ಹಾಗೂ 33 ಅಡಿ ಎತ್ತರದ ಏಕಶಿಲಾ ಆಂಜನೇಯ ಸ್ವಾಮಿ’ ವಿಗ್ರಹದ ಶಿಲಾ ಪ್ರತಿಷ್ಠಾಪನಾ ಕಾರ್ಯಕ್ರಮವನ್ನು ಉದ್ಘಾಟಿಸಿ, ಮಹಾ ಕುಂಭಾಭಿಷೇಕದಲ್ಲಿ ಭಾಗವಹಿಸಿದೆ ಎಂದಿದ್ದಾರೆ.
ಈ ಸಂದರ್ಭ ಸಚಿವರಾದ ಭೈರತಿ ಸುರೇಶ್, ಈಶ್ವರ್ ಖಂಡ್ರೆ, ರಾಮಲಿಂಗರೆಡ್ಡಿ ಮತ್ತು ಶಾಸಕಿ ಮಂಜುಳಾ ಲಿಂಬಾವಳಿ ಹಾಗೂ ಮಾಜಿ ಸಚಿವ ಅರವಿಂದ ಲಿಂಬಾವಳಿ ಭಾಗಿಯಾಗಿದ್ದರು.