ಒಡಿಶಾ ಸಿಎಂ ನವೀನ್‌ ಪಟ್ನಾಯಕ್‌ ಸೋದರಿ, ಲೇಖಕಿ ಗೀತಾ ಮೆಹ್ತಾ ವಿಧಿವಶ

ಹೊಸದಿಗಂತ ಡಿಜಿಟಲ್‌ ಡೆಸ್ಕ್:

ಒಡಿಶಾ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಅವರ ಸಹೋದರಿ ಗೀತಾ ಮೆಹತಾ (80) ಅವರು ಶನಿವಾರ ದೆಹಲಿಯಲ್ಲಿ ವಿಧಿವಶರಾಗಿದ್ದಾರೆ.

ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಇಂಗ್ಲಿಷ್‌ ಲೇಖಕಿ, ಖ್ಯಾತ ಪತ್ರಕರ್ತೆ ಗೀತಾ ಮೆಹ್ತಾ ಅವರು ನಿನ್ನೆ ಮೃತರಾಗಿದ್ದಾರೆ. ಅವರ ನಿಧನಕ್ಕೆ ಪ್ರಧಾನಿ ಮೋದಿ ಸಂತಾಪ ಸೂಚಿಸಿದ್ದಾರೆ.

ಈ ಕುರಿತು ಪ್ರಧಾನಿ ನರೇಂದ್ರ ಮೋದಿ ಟ್ವೀಟ್‌ ಮಾಡಿದ್ದು, ‘ಮೆಹ್ತಾ ಅವರದ್ದು ಬಹುಮುಖಿ ವ್ಯಕ್ತಿತ್ವ. ಬರವಣಿಗೆ ಮತ್ತು ಸಾಕ್ಷ್ಯ ಚಿತ್ರ ನಿರ್ಮಾಣದಲ್ಲಿ ಅವರು ಖ್ಯಾತಿ ಗಳಿಸಿದ್ದರು. ಪ್ರಕೃತಿ ಮತ್ತು ನೀರಿನ ಸಂರಕ್ಷಣೆಯ ಬಗೆಗೆ ಒಲವು ಹೊಂದಿದ್ದರು’ ಎಂದು ಪೋಸ್ಟ್‌ ಮೂಲಕ ಸಂತಾಪ ವ್ಯಕ್ತಪಡಿಸಿದ್ದಾರೆ.

ಕೇಂದ್ರ ಸರ್ಕಾರ 2019ರ ಜನವರಿಯಲ್ಲಿ ಗೀತಾ ಮೆಹ್ತಾ ಅವರಿಗೆ ಪದ್ಮಶ್ರೀ ಘೋಷಿಸಿತ್ತು. ಆದರೆ, ಪ್ರಶಸ್ತಿ ಸ್ವೀಕರಿಸಲು ಅವರು ನಿರಾಕರಿಸಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!