ಹೊಸದಿಗಂತ ಡಿಜಿಟಲ್ ಡೆಸ್ಕ್:
ಒಡಿಶಾದ ಆಡಳಿತಾರೂಢ ಬಿಜು ಜನತಾದಳ ಸಚಿವ ಸಂಪುಟದ ಎಲ್ಲ ಸಚಿವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಈ ಮೂಲಕ ಸಂಚಲನ ಮೂಡಿದೆ.
ನಾಳೆ ಹೊಸದಾಗಿ ಸಚಿವ ಸಂಪುಟ ರಚನೆಯಾಗಲಿದ್ದು, ಇದರ ನಡುವೆ ಒಡಿಶಾ ಸ್ಪೀಕರ್ ಸೂರ್ಜ್ಯ ನಾರಾಯಣ ಪಾತ್ರ ಸಹ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಇದರ ಬೆನ್ನಲ್ಲೇ ಸಚಿವ ಸಂಪುಟದ ಎಲ್ಲರೂ ಮುಖ್ಯಮಂತ್ರಿಗಳಿಗೆ ತಮ್ಮ ರಾಜೀನಾಮೆ ಪತ್ರ ಸಲ್ಲಿಕೆ ಮಾಡಿದ್ದಾರೆ.
2024ರ ವಿಧಾನಸಭೆಗೆ ತಯಾರಿ ನಡೆಸಿರುವ ಬೆನ್ನಲ್ಲೇ ಈ ಮಹತ್ವದ ಬೆಳವಣಿಗೆ ಕಂಡು ಬಂದಿದೆ.
ಮುಖ್ಯಮಂತ್ರಿ ನವೀನ್ ಪಟ್ನಾಯಕ್ ನೇತೃತ್ವದಲ್ಲೇ ಹೊಸದಾಗಿ ಸಚಿವ ಸಂಪುಟ ರಚನೆಯಾಗಲಿದೆ. ಈ ವೇಳೆ ಹೊಸದಾಗಿ 20 ಸಚಿವರು ಪದಗ್ರಹಣ ಮಾಡುವ ಸಾಧ್ಯತೆ ಇದೆ. ಕಳೆದ ಮೇ 29ಕ್ಕೆ ಬಿಜೆಡಿ ಸರ್ಕಾರ ಮೂರು ವರ್ಷ ಪೂರೈಕೆ ಮಾಡಿದ್ದು, ಇದರ ಬೆನ್ನಲ್ಲೇ ಈ ಮಹತ್ವದ ಬೆಳವಣಿಗೆ ಕಂಡು ಬಂದಿದೆ.