ಕಾರುಗಳ ಮುಖಾಮುಖಿ ಡಿಕ್ಕಿ : ಸ್ಥಳದಲ್ಲಿಯೇ ಇಬ್ಬರ ಸಾವು

ಹೊಸ ದಿಗಂತ ವರದಿ, ತುಮಕೂರು:

ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲಿಯೇ ಇಬ್ಬರು ಮೃತಪಟ್ಟ ಘಟನೆತಿಪಟೂರು ತಾಲೂಕಿನ ಮತಿಘಟ್ಟ ಗೇಟ್ ಬಳಿ ನಡೆದಿದೆ.

ತಾಲ್ಲೂಕಿನ ಮತ್ತಿಹಳ್ಳಿ ಗೇಟ್ ಬಳಿಯಲ್ಲಿ ಮಂಗಳವಾರ ಸಂಜೆ ಅಪಘಾತ ಸಂಭವಿಸಿದ್ದು ಬ್ರೀಜಾ ಹಾಗೂ ಸ್ವಿಫ್ಟ್ ಕಾರ್‍ಗಳ ಮಧ್ಯೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಇದರಿಂದಾಗಿ ಸ್ವಿಫ್ಟ್ ಕಾರಿನಲ್ಲಿ ಇದ್ದ ಗುಬ್ಬಿ ತಾಲ್ಲೂಕಿನ ಕಡಬಾ ಹೋಬಳಿಯ ಬೆಲವತ್ತ ಗ್ರಾಮದ ವಾಸಿ ವೆಂಕಟಾಚಲ (49), ಗುಬ್ಬಿ ತಾಲ್ಲೂಕಿನ ಸಿ.ಎಸ್.ಪುರ ಹೋಬಳಿಯ ಮಾವಿನಹಳ್ಳಿ ಗ್ರಾಮದ ವಾಸಿ ಶೇಖರಯ್ಯ(45) ಮೃತ ದುರ್ದೈವಿಗಳು. ಇನ್ನೂ ಮತ್ತೊಂದು ಬ್ರೀಜಾ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಮಂಡ್ಯವಾಸಿಗಳಾದ ಚಂದನ್, ಜಗದೀಶ್, ಗೋಪಿನಾಥ್, ಪ್ರವೀಣ್ ತೀವ್ರ ಗಾಯಗೊಂಡಿದ್ದು ಚಿಕಿತ್ಸೆಗಾಗಿ ತಿಪಟೂರಿನ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ತಾಲ್ಲೂಕಿನ ಹೊನ್ನವಳ್ಳಿಯ ಪೊಲೀಸರು ಸ್ಥಳಕ್ಕೆ ಆಗಮಿಸಿ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!