ಹೊಸದಿಗಂತ ವರದಿ, ಮೈಸೂರು:
ಇಲ್ಲಿನ ಚಾಮುಂಡಿಬೆಟ್ಟಕ್ಕೆ ಭಕ್ತರನ್ನು ಕರೆದುಕೊಂಡು ಹೋಗುತ್ತಿದ್ದ ಸಾರಿಗೆ ಸಂಸ್ಥೆಯ ಬಸ್ಸಿನ ಟೈರ್ ಬಸ್ಟ್ ಆಗಿದ್ದು, ಚಾಲಕನ ಸಮಯ ಪ್ರಜ್ಞೆಯಿಂದ ಭಾರೀ ಅನಾಹುತ ತಪ್ಪಿದ ಘಟನೆ ಶುಕ್ರವಾರ ನಡೆಯಿತು.
ಚಾಮುಂಡಿಬೆಟ್ಟದ ತಪ್ಪಲಿನ ಲಲಿತಮಹಲ್ ಹೋಟೆಲ್ ಬಳಿಯ ಮೈದಾನದಿಂದ ಚಾಮುಂಡಿಬೆಟ್ಟಕ್ಕೆ ಭಕ್ತರನ್ನು ಕರೆದುಕೊಂಡು ಹೋಗಿ ಬರುವುದಕ್ಕೆ ಸಾರಿಗೆ ಸಂಸ್ಥೆಯ ಬಸ್ ಸಂಚಾರದ ವ್ಯವಸ್ಥೆಯನ್ನು ಜಿಲ್ಲಾಡಳಿತ ಮಾಡಿದ್ದು, ಬೆಟ್ಟಕ್ಕೆ ಭಕ್ತರನ್ನು ಕರೆದುಕೊಂಡು ಹೋಗುತ್ತಿದ್ದ ಸಾತಗಳ್ಳಿ ಡಿಪೋಗೆ ಸೇರಿದ ಬಸ್, ತಿರುವಿನಲ್ಲಿದ್ದಾಗ ಟೈರ್ ಬಸ್ಟ್ ಆಗಿದೆ. ಹೀಗಾಗಿ ನಿಯಂತ್ರಣದ ತಪ್ಪಿದ ಬಸ್ನ್ನು ಚಾಲಕ ಸಮಯಪ್ರಜ್ಞೆ ಮೆರೆದು, ರಸ್ತೆ ವಿಭಜಕ್ಕೆ ಡಿಕ್ಕಿ ಹೊಡೆಸಿ, ಬಸ್ ನಿಲ್ಲುವಂತೆ ಮಾಡಿ, ಭಾರೀ ಅನಾಹುತವನ್ನು ತಪ್ಪಿಸಿದ್ದಾನೆ. ಇದರಿಂದಾಗಿದ್ದ ಬಸ್ಸಿನಲ್ಲಿದ್ದ 60ಕ್ಕೂ ಹೆಚ್ಚು ಮಂದಿ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.