ಹಿಂದು ದೇವತೆಗಳ ಬಗ್ಗೆ ಅವಹೇಳನಕಾರಿ ಹೇಳಿಕೆ: ಡ್ಯಾನಿಶ್ ಖುರೇಷಿ ಬಂಧನ

ಹೊಸ ದಿಗಂತ ಡಿಜಿಟಲ್ ಡೆಸ್ಕ್‌:

ಹಿಂದು ದೇವತೆಗಳ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದ ಆಲ್ ಇಂಡಿಯಾ ಮಜ್ಲಿಸ್-ಎ-ಇತ್ತೆಹಾದುಲ್ ಮುಸ್ಲಿಮೀನ್ ನಾಯಕ ಡ್ಯಾನಿಶ್ ಖುರೇಷಿಯನ್ನು ಅಹಮದಾಬಾದ್ ಸೈಬರ್ ಕ್ರೈಮ್ ತಂಡ ಬಂಧಿಸಿದೆ.
ಡ್ಯಾನಿಶ್ ಖುರೇಷಿಯ ಟ್ವೀಟ್‌ನಿಂದ ಹಿಂದುಗಳ ಭಾವನೆಗಳಿಗೆ ಧಕ್ಕೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಟ್ವೀಟ್‌ನಲ್ಲಿರುವ ವಿಷಯವು ಬಹುಸಂಖ್ಯಾತ ಸಮುದಾಯದ ಭಾವನೆಗಳಿಗೆ ಧಕ್ಕೆ ತರುತ್ತದೆ. ಹಾಗಾಗಿ ಸೈಬರ್ ಕ್ರೈಮ್ ಅದರ ತನಿಖೆಯನ್ನು ಪ್ರಾರಂಭಿಸಿದೆ ಎಂದು ಗುಜರಾತ್ ಸೈಬರ್ ಕ್ರೈಮ್ ಸಹಾಯಕ ಪೊಲೀಸ್ ಕಮಿಷನರ್ ಜೆಎಂ ಯಾದವ್ ತಿಳಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!