ಹೊಸದಿಗಂತ ಡಿಜಿಟಲ್ ಡೆಸ್ಕ್:
ಹರಿಯಾಣದ ಕರ್ನಾಲ್ ನಲ್ಲಿ ಬಂಧಿತ ಉಗ್ರರಿಂದ ಸ್ಫೋಟಕ ಮಾಹಿತಿ ಹೊರಬಿದಿದ್ದು, ಇವರು ಮುಂಬೈ ರೈಲುಗಳಲ್ಲಿ ಸರಣಿ ಸ್ಫೋಟಕ್ಕೆ ಯೋಜನೆ ರೂಪಿಸಿದ್ದರು ಎಂಬ ಮಾಹಿತಿ ಗೊತ್ತಾಗಿದೆ.
ಬಂಧಿತರಾಗಿರುವ ನಾಲ್ವರು ಭಯೋತ್ಪಾದಕರು ಮುಂಬೈನಲ್ಲಿ ಸ್ಥಳೀಯ ಮತ್ತು ಪ್ರಯಾಣಿಕ ರೈಲುಗಳನ್ನು ಗುರಿಯಾಗಿಸಲು ಸಂಚು ರೂಪಿಸುತ್ತಿದ್ದರು ಎಂದು ಅವರು ವಿಚಾರಣೆಯ ವೇಳೆ ಬಹಿರಂಗಪಡಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಸ್ಫೋಟಕಗಳನ್ನು ತಲುಪಿಸಲು ತೆಲಂಗಾಣಕ್ಕೆ ತೆರಳುತ್ತಿದ್ದ ಪಾಕಿಸ್ತಾನದ ನಾಲ್ವರು ಶಂಕಿತ ಭಯೋತ್ಪಾದಕರನ್ನು ಗುರುವಾರ ಕರ್ನಾಲ್ ನಲ್ಲಿ ಬಂಧಿಸಲಾಗಿತ್ತು. .
ಭಯೋತ್ಪಾದಕ ಚಟುವಟಿಕೆಗಳಲ್ಲಿ ತೊಡಗಿರುವ ಪಾಕಿಸ್ತಾನ ಮೂಲದ ವ್ಯಕ್ತಿಯೊಂದಿಗೆ ಸಂಪರ್ಕದಲ್ಲಿದ್ದರು. ಸ್ಫೋಟಕಗಳು ಮತ್ತು ಶಸ್ತ್ರಾಸ್ತ್ರಗಳನ್ನು ತಲುಪಿಸಲು ಆಯಪ್ ಮೂಲಕ ಸ್ಥಳಗಳನ್ನು ಕಳುಹಿಸುತ್ತಿದ್ದರು ಎಂದು ಕರ್ನಾಲ್ನ ಪೊಲೀಸ್ ವರಿಷ್ಠಾಧಿಕಾರಿ ಗಂಗಾರಾಮ್ ಪುನಿಯಾ ಕರ್ನಾಲ್ ನಲ್ಲಿ ಸುದ್ದಿಗಾರರಿಗೆ ತಿಳಿಸಿದರು.