ಬಿಜೆಪಿ ವಿಭಾಗದ ಮಟ್ಟದ ಕೋರ್ ಕಮಿಟಿ ಸಭೆ: ಚುನಾವಣೆಯ ರೂಪರೇಷೆಗಳ ಚರ್ಚೆ

 ಹೊಸ ದಿಗಂತ ವರದಿ, ಕಲಬುರಗಿ:

ಕಲಬುರಗಿ ನಡೆಯುತ್ತಿರುವ ಬಿಜೆಪಿ ವಿಭಾಗದ ಮಟ್ಟದ ಕೋರ್ ಕಮಿಟಿ ಸಭೆಯಲ್ಲಿ ಗುರುವಾರ ಸಿಎಂ ಬಸವರಾಜ ಬೊಮ್ಮಾಯಿ, ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಸೇರಿದಂತೆ ಹಲವು ನಾಯಕರು ಭಾಗಿಯಾದರು.
ನಗರದ ಹೊರವಲದ ಸೇಡಂ ರಸ್ತೆಯ ಗೀತಾ ನಗರದ ಬ್ರಹ್ಮ ಕುಮಾರಿ ಆಶ್ರಮದಲ್ಲಿ ಎರಡು ದಿನಗಳ ಕಾಲ ಹಮ್ಮಿಕೊಂಡಿರುವ ಬಿಜೆಪಿ ವಿಭಾಗಯ ಕಲಬುರಗಿ, ಬೀದರ ಹಾಗೂ ಯಾದಗಿರಿ ಜಿಲ್ಲೆಗಳ ಪದಾಧಿಕಾರಿಗಳ, ಜಿಲ್ಲಾ ಪ್ರಮುಖರ ಕಾರ್ಯಕಾರಣಿ ಸಭೆ ಜರುಗಿತು.
ಸಭೆಯಲ್ಲಿ ಪಕ್ಷದ ಕಾರ್ಯಕರ್ತರ ಸಮಸ್ಯೆಗಳು, ಹಾಗೂ ಪಕ್ಷ ಸಂಘಟನೆ, ಮುಂಬರುವ ಚುನಾವಣೆಯ ರೂಪರೇಷೆಗಳ ಬಗ್ಗೆ ಚರ್ಚಿಸಲಾಯಿತು.
ಈ ಸಂದರ್ಭದಲ್ಲಿ ರಾಜ್ಯ ಸಂಘಟನಾ ಪ್ರಧಾನ ಕಾರ್ಯದರ್ಶಿಅರುಣ್‌ ಕುಮಾರ್‌, ರಾಜ್ಯ ಉಪಾಧ್ಯಕ್ಷ ಲಕ್ಷ್ಮಣ ಸವದಿ, ಬಿ. ವೈ. ವಿಜಯೇಂದ್ರ, ರಾಜ್ಯ ಕಾರ್ಯದರ್ಶಿ ಹಾಗೂ ತಂಡದ ಸಂಯೋಜಕ ವಿನಯ್ ಬಿದರೆ, ಸಚಿವರಾದ ಡಾ. ಮುರುಗೇಶ್ ನಿರಾಣಿ, ಪ್ರಭು ಚವ್ಹಾಣ್, ಶಾಸಕರಾದ ದತ್ತಾತ್ರೇಯ ಪಾಟೀಲ್ ರೇವೂರ್, ಬಸವರಾಜ ಮತ್ತಿಮೂಡ, ವಿಧಾನ ಪರಿಷತ್ ಸದಸ್ಯರಾದ ಬಿ.ಜಿ.ಪಾಟೀಲ್, ಶಶಿಲ್ ನಮೋಶಿ, ಬಿಜೆಪಿ ಜಿಲ್ಲಾ ಗ್ರಾಮಾಂತರ ಅಧ್ಯಕ್ಷ ಶಿವರಾಜ್ ಪಾಟೀಲ್, ನಗರ ಅಧ್ಯಕ್ಷ ಸಿದ್ದಾಜಿ ಪಾಟೀಲ್ ಸೇರಿದಂತೆ ವಿಭಾಗ ಪ್ರಮುಖರು ಉಪಸ್ಥಿತರಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!