ಚಹಾ ಅಂಗಡಿ ಮೇಲೆ ಅಧಿಕಾರಿಗಳ ದಾಳಿ: ಪ್ಲಾಸ್ಟಿಕ್ ಕಪ್ ಜಪ್ತಿ

ಹೊಸದಿಗಂತ ವರದಿ, ವಿಜಯಪುರ

ಇಲ್ಲಿನ ಜಿಲ್ಲಾಸ್ಪತ್ರೆ ಬಳಿಯ ಚಹಾ ಅಂಗಡಿಯೊಂದರಲ್ಲಿ ಪ್ಲಾಸ್ಟಿಕ್ ಕಪ್ ಬಳಸುತ್ತಿದ್ದ ಹಿನ್ನೆಲೆ ಪಾಲಿಕೆ ಅಧಿಕಾರಿಗಳು ದಾಳಿ ನಡೆಸಿ, ಪ್ಲಾಸ್ಟಿಕ್ ಕಪ್ ಜಪ್ತಿ ಮಾಡಿ, ಅಂಗಡಿಕಾರನಿಗೆ ದಂಡ ವಿಧಿಸಿದ್ದಾರೆ.

ಮಹಾನಗರ ಪಾಲಿಕೆ ಆಯುಕ್ತ ವಿಜಯಕುಮಾರ ಮೆಕ್ಕಳಕಿ ನೇತೃತ್ವದಲ್ಲಿ ಚಹಾ ಅಂಗಡಿ ಮೇಲೆ ದಾಳಿ ಮಾಡಲಾಗಿದ್ದು, ಪ್ಲಾಸ್ಟಿಕ್ ಕಪ್, ಪ್ಲಾಸ್ಟಿಕ್ ಬಳಕೆ ಮಾಡದಂತೆ ಅಂಗಡಿ ಮಾಲೀಕನಿಗೆ ಎಚ್ಚರಿಕೆ ನೀಡಿ, ದಂಡ ವಿಧಿಸಲಾಗಿದೆ.

ಈ ದಾಳಿ ವೇಳೆಯಲ್ಲಿ ಆರೋಗ್ಯ ಇನ್ಸ್‌ಪೆಕ್ಟರ್ ಸಂಜು ಅಥಣಿ ಸೇರಿದಂತೆ ಅಧಿಕಾರಿಗಳು ಇದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!