ಹೊಸದಿಗಂತ ಡಿಜಿಟಲ್ ಡೆಸ್ಕ್:
ಕದನ ವಿರಾಮ ಉಲ್ಲಂಘನೆ ಮಾಡೋದು ಪಾಕಿಸ್ತಾನದ ಚಾಳಿಯಾಗಿಬಿಟ್ಟಿದೆ. ಭಾರತೀಯ ಸೇನಾ ದಾಳಿಗೆ ವಿರಾಮದ ನಾಟಕವಾಡಿದ್ದ ಪಾಕ್ ಮತ್ತೆ ಬಾಲ ಬಿಚ್ಚಿದೆ. ಕದನ ವಿರಾಮ ಘೋಷಣೆಯಾದ ಕೆಲವೇ ಗಂಟೆಗಳ ಬಳಿಕ ಭಾರತದ ಗಡಿಯಲ್ಲಿ ದಾಳಿ ನಡೆಸಿದೆ.
ಶನಿವಾರ ರಾತ್ರಿ ರಾಷ್ಟ್ರವನ್ನುದ್ದೇಶಿಸಿ ಮಾತನಾಡಿದ ಪಾಕ್ ಪ್ರಧಾನಿ ಶೆಹಬಾಜ್ ಷರೀಫ್, ಭಾರತ ಮಾಡಿದ್ದು ತಪ್ಪು, ಅದಕ್ಕೆ ನಮ್ಮ ಸೇನೆ ಸೂಕ್ತ ಉತ್ತರ ಕೊಟ್ಟಿದೆ. ಭಾರತದ ಆಧಾರರಹಿತ ಆರೋಪಗಳ ಬಗ್ಗೆ ಪಾಕಿಸ್ತಾನ ಮತ್ತೊಮ್ಮೆ ನಿಷ್ಪಕ್ಷಪಾತ ತನಿಖೆಯನ್ನು ನಡೆಸುತ್ತದೆ ಎಂದು ಬೊಗಳೆ ಬಿಟ್ಟಿದ್ದಾರೆ.
ಇದೇ ವೇಳೆ ಕದನ ವಿರಾಮಕ್ಕಾಗಿ ಪಾಕ್ ಪ್ರಧಾನಿ, ಡೊನಾಲ್ಡ್ ಟ್ರಂಪ್ ಮತ್ತು ಗಲ್ಫ್ ರಾಷ್ಟ್ರಗಳಿಗೆ ಧನ್ಯವಾದ ತಿಳಿಸಿದ್ದಾರೆ. ನಾನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಧನ್ಯವಾದ ಹೇಳಲು ಬಯಸುತ್ತೇನೆ. ಜೊತೆಗೆ ಕದನ ವಿರಾಮದಲ್ಲಿ ಪ್ರಮುಖ ಪಾತ್ರ ವಹಿಸಿದ ಸೌದಿ ಅರೇಬಿಯಾ, ಯುಎಇ, ಟರ್ಕಿ ಮತ್ತು ಕತಾರ್ಗಳಿಗೆ ಧನ್ಯವಾದ ಸಲ್ಲಿಸುತ್ತೇನೆ ಎಂದು ಹೇಳಿದ್ದಾರೆ.