ಹಳೇ ದ್ವೇಷಕ್ಕೆ ಹರಿಯಿತು ನೆತ್ತರು: ಕಲ್ಲಿನಿಂದ ಜಜ್ಜಿ ವ್ಯಕ್ತಿಯ ಬರ್ಬರ ಹತ್ಯೆ

ಹೊಸದಿಗಂತ ವಿಜಯನಗರ:

ಹಳೇ ದ್ವೇಷದಿಂದ ವ್ಯಕ್ತಿಯೊಬ್ಬನನ್ನು ಬರ್ಬರವಾಗಿ ಪತ್ಯೆ ಮಾಡಿರುವ ಘಟನೆ ಬುಧವಾರ ರಾತ್ರಿ ನಡೆದಿದೆ.

ಹೊಸಪೇಟೆ ಮೂಲದ ಹಾಲಿ ನಿವಾಸಿ ದಾವಣಗೆರೆಯ ಹೊನ್ನೂರಸ್ವಾಮಿ (28) ಮೃತ ವ್ಯಕ್ತಿಯಾಗಿದ್ದು, ಕಾಳಿ ಅಲಿಯಾಸ್ ಕಾಳಿದಾಸ್(30) ಕೊಲೆ ಆರೋಪಿಯಾಗಿದ್ದಾನೆ. ಹೊಸಪೇಟೆಯ ಜಂಬುನಾಥ ಜಾತ್ರೆ ನಿಮಿತ್ತ ಹೊನ್ನೂರ‌ಸ್ವಾಮಿ ಆಗಮಿಸಿರುವ ಬಗ್ಗೆ ಮಾಹಿತಿ ತಿಳಿದ ಆರೋಪಿ ಚಾಕುವಿನಿಂದ ಚುಚ್ಚಿ, ನಂತರ ತಲೆ ಮೇಲೆ ಕಲ್ಲಿನಿಂದ ಜಜ್ಜಿ ಕೊಲೆ ಮಾಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಕುರಿತು ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ದಾವಿಸಿದ ಎಸ್ಪಿ ಶ್ರೀಹರಿಬಾಬು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲಿಸಿದರು. ಬಳಿಕ ಎಸ್ಪಿ ಮಾರ್ಗದರ್ಶನದಲ್ಲಿ ಆರೋಪಿ ಕಾಳಿದಾಸನನ್ನು ಬಂಧಿಸಲಾಗಿದೆ.

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!