ಹಳೆ ಹುಬ್ಬಳ್ಳಿ ಗಲಭೆ ಪ್ರಕರಣ, ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷರಿಂದ ಸ್ಥಳ ಪರಿಶೀಲನೆ

ಹೊಸದಿಗಂತ ವರದಿ ಹುಬ್ಬಳ್ಳಿ:

ನಗರದ ಹಳೆ ಹುಬ್ಬಳ್ಳಿಯಲ್ಲಿ ನಡೆದ ಗಲಭೆಗೆ ಸಂಬಂಧಿಸಿಂತೆ ಗುರುವಾರ ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷ ಅಬ್ದುಲ್ ಅಜೀಮ್ ಹಾಗೂ ಕಾರ್ಯದರ್ಶಿ ಮೊಹಮ್ಮದ ನಜೀರ್ ಘಟನೆ ನಡೆದ ವಿವಿಧ ಸ್ಥಳಗಳಿಗೆ ಭೇಟಿ ನೀಡಿದರು. ನಂತರ ಹಳೆ ಹುಬ್ಬಳ್ಳಿ ಪೊಲೀಸ್ ಠಾಣೆಗೆ ಭೇಟಿ ನೀಡಿ ಗಲಭೆಯ ಕುರಿತು ಸಂಪೂರ್ಣ ಮಾಹಿತಿಯನ್ನು ಡಿಸಿಪಿ ಸಾಹೀಲ್ ಬಾಗ್ಲ ಅವರೊಂದಿಗೆ ಪಡೆದರು.

ಘಟನೆ‌ ವೇಳೆ ಕಲ್ಲು ತೂರಾಟವಾದ ದಿಡ್ಡಿ ಓಣಿಯ ಹನುಮಂತ ದೇವಸ್ಥಾನಕ್ಕೆ ಭೇಟೆ ನೀಡಿ, ಹಾನಿಯನ್ನು ಪರಿಶೀಲಿಸಿದರು. ದೇವಸ್ಥಾನದ ಅರ್ಚಕರು ಮತ್ತು ಟ್ರಸ್ಟಿಗಳಿಂದ ಘಟನೆ ಬಗ್ಗೆ ಮಾಹಿತಿ ಪಡೆದರು. ಪೊಲೀಸರು ಮುಂದೆ ಹೀಗಾಗದಂತೆ ಕ್ರಮ ಕೈಗೊಳ್ಳಲಿದ್ದಾರೆ ಎಂದು ಭರವಸೆ ನೀಡಿದರು.

ಡಿಸಿಪಿ ಸಾಹಿಲ್ ಬಾಗ್ಲಾ, ಪಾಲಿಕೆ ಆಯುಕ್ತ ಡಾ. ಬಿ. ಗೋಪಾಲಕೃಷ್ಣ, ಸಮಾಜ ಕಲ್ಯಾಣ ಜಂಟಿ ನಿರ್ದೇಶಕ ಹಾಗೂ ಪ್ರಭಾರ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಅಧಿಕಾರಿ ಡಾ. ಎನ್.ಆರ್. ಪುರಷೋತ್ತಮ್‌ ಸಾಥ್‌ ನೀಡಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!