ಹೊಸದಿಗಂತ ಡಿಜಿಟಲ್ ಡೆಸ್ಕ್:
ಹಳೇ ಹುಬ್ಬಳ್ಳಿಯಲ್ಲಿ ಗಲಭೆ ಪ್ರಕರಣದಲ್ಲಿ 35 ಆರೋಪಿಗಳಿಗೆ ಜಾಮೀನು ನೀಡಿ ಸುಪ್ರೀಂಕೋರ್ಟ್ ಆದೇಶ ಹೊರಡಿಸಿದೆ.
ವಾಟ್ಸಾಪ್ ಸ್ಟೇಟಸ್ ವಿಚಾರವಾಗಿ 2022ರ ಏಪ್ರಿಲ್ 16ರಂದು ಹಳೇ ಹುಬ್ಬಳ್ಳಿಯಲ್ಲಿ ಎರಡು ಕೋಮುಗಳ ನಡುವೆ ಗಲಾಟೆಯಾಗಿತ್ತು.
ಈ ಪ್ರಕರಣದಲ್ಲಿ ಒಟ್ಟು 152 ಆರೋಪಿಗಳ ಬಂಧನವಾಗಿದ್ದು, ಈ ಹಿಂದೆ ಕೆಲ ಬಾಲಾಪರಾಧಿಗಳು ಸೇರಿ 10ಕ್ಕೂ ಹೆಚ್ಚು ಮಂದಿಗೆ ಜಾಮೀನು ಸಿಕ್ಕಿತ್ತು. ಮೊನ್ನೇ ಸೋಮವಾರ ಅಷ್ಟೇ ಬಂಧಿತರಾಗಿದ್ದ ಸಿಕಂದರ್ ಮತ್ತು ಇರ್ಫಾನ್ ನಾಲತವಾಡ ಗೆ ಸುಪ್ರೀಂ ಕೋರ್ಟ್ ಜಾಮೀನು ನೀಡಿತ್ತು. ಇದೀಗ 35 ಆರೋಪಿಗೂ ಸಹ ಜಾಮೀನು ಸಿಕ್ಕಿದೆ.