ಓಂ ಪ್ರಕಾಶ್ ಕೊಲೆ ಪ್ರಕರಣ: ACP ವಿಕಾಸ್ ಕೊಟ್ರು ಮಹತ್ವದ ಮಾಹಿತಿ

ಹೊಸದಿಗಂತ ಡಿಜಿಟಲ್ ಡೆಸ್ಕ್ :

​ನಿವೃತ್ತ ಪೊಲೀಸ್​ ಮಹಾನಿರ್ದೇಶಕ ಓಂ ಪ್ರಕಾಶ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸದ್ಯಕ್ಕೆ ಯಾರನ್ನೂ ಅರೆಸ್ಟ್ ಮಾಡಿಲ್ಲ, FIR ದಾಖಲಿಸುತ್ತೇವೆ ಎಂದು ಪಶ್ಚಿಮ ವಿಭಾಗದ ಹೆಚ್ಚುವರಿ ಪೊಲೀಸ್ ಆಯುಕ್ತ ವಿಕಾಸ್ ತಿಳಿಸಿದ್ದಾರೆ.

ಘಟನೆ ಕುರಿತು ಮಾಹಿತಿ ನೀಡಿದ ಅವರು, ಓಂ ಪ್ರಕಾಶ್ ಪುತ್ರ ದೂರು ನೀಡಿದ್ದಾರೆ. ಸದ್ಯಕ್ಕೆ ಯಾರನ್ನೂ ಅರೆಸ್ಟ್ ಮಾಡಿಲ್ಲ, FIR ದಾಖಲಿಸುತ್ತೇವೆ. ಮರಣೋತ್ತರ ಪರೀಕ್ಷೆ ಬಳಿಕ ಮಾಹಿತಿ ಸಿಗಲಿದೆ. ಮೂವರು ಮನೆಯಲ್ಲಿದ್ದ ಬಗ್ಗೆ ಖಚಿತವಾಗಿ ಮಾಹಿತಿ ಇದೆ. ಪತ್ನಿ, ಮಗಳನ್ನು ವಶಕ್ಕೆ ಪಡೆದು ವಿಚಾರಣೆ ಮಾಡಲಾಗುತ್ತಿದೆ ಎಂದು ಹೇಳಿದರು.

ಶಾರ್ಪ್ ವೆಪನ್​ನಿಂದ ಹಿರಿದು ಕೊಲೆ ಮಾಡಲಾಗಿದೆ. ರಕ್ತಸ್ರಾವ ಆಗಿರೋದು ಗೊತ್ತಾಗಿದೆ. ಮರಣೋತ್ತರ ಪರೀಕ್ಷೆಗೆ ಮೃತದೇಹ ರವಾನೆ ಮಾಡಲಾಗಿದೆ ಎಂದು ತಿಳಿಸಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here