ಹೊಸದಿಗಂತ ಡಿಜಿಟಲ್ ಡೆಸ್ಕ್:
ನಿವೃತ್ತ ಪೊಲೀಸ್ ಮಹಾನಿರ್ದೇಶಕ ಓಂ ಪ್ರಕಾಶ್(68) ಕೊಲೆ ಕೇಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಓಂ ಪ್ರಕಾಶ್ ಪತ್ನಿ ಪಲ್ಲವಿಯನ್ನ ಹೆಚ್ಎಸ್ಆರ್ ಲೇಔಟ್ ಪೊಲೀಸರು ಬಂಧಿಸಿದ್ದಾರೆ.
ನಗರದ ಹೆಚ್ಎಸ್ಆರ್ ಲೇಔಟ್ನಲ್ಲಿರುವ ತಮ್ಮ ನಿವಾಸದಲ್ಲೇ ಓಂ ಪ್ರಕಾಶ್ ನಿನ್ನೆ ಹತ್ಯೆಯಾಗಿದ್ದು, ಚಾಕುವಿನಿಂದ ಇರಿದು ಕೊಲೆ ಮಾಡಲಾಗಿದೆ.
ಓಂ ಪ್ರಕಾಶ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರ ಪುತ್ರ ದೂರು ನೀಡಿದ್ದರು. ಮೊದಲಿಗೆ ಯಾರನ್ನು ಬಂಧಿಸಿರಲಿಲ್ಲ. ಅವರ ಪತ್ನಿ, ಮಗಳನ್ನು ವಶಕ್ಕೆ ಪಡೆದು ವಿಚಾರಣೆ ಮಾಡಲಾಗಿತ್ತು. ಇದೀಗ ಓಂ ಪ್ರಕಾಶ್ ಪತ್ನಿ ಪಲ್ಲವಿ ಅವರನ್ನು ಬಂಧಿಸಿಲಾಗಿದೆ.
ಇನ್ನು ಪ್ರಕರಣಕ್ಕೆ ಸಂಬಂಧಿಸಿದಂತೆ ಪಲ್ಲವಿ, ಪುತ್ರಿ ಕೃತಿ, ಪುತ್ರ ಕಾರ್ತಿಕೇಶ್ ಸೇರಿದಂತೆ ಕುಟುಂಬಸ್ಥರು ಮತ್ತು ಸಂಬಂಧಿಕರ ಹೇಳಿಕೆಯನ್ನು ಎಚ್ಎಸ್ಆರ್ ಲೇಔಟ್ ಪೊಲೀಸರು ದಾಖಲಿಸಿಕೊಂಡಿದ್ದಾರೆ. ಜೊತೆಗೆ ಒಟ್ಟು ಮೂರು ಮೊಬೈಲ್ ಸೀಜ್ ಮಾಡಿದ್ದಾರೆ. ಪ್ರಾಥಮಿಕ ವಿಚಾರಣೆ ವೇಳೆ ಆತ್ಮ ರಕ್ಷಣೆಗಾಗಿ ಕೊಲೆ ಮಾಡಿರುವುದಾಗಿ ಪತ್ನಿ ಪಲ್ಲವಿ ಮಡಿವಾಳ ಎಸಿಪಿ ವಾಸುದೇವ್ ಮುಂದೆ ಹೇಳಿದ್ದಾರೆ.
ಪುತ್ರ ಕಾರ್ತಿಕೇಶ್ ತನ್ನ ಸಹೋದರಿ ಕೃತಿ ಹಾಗೂ ತಾಯಿ ಪಲ್ಲವಿ ವಿರುದ್ಧ ದೂರು ದಾಖಲಿಸಿದ್ದಾರೆ. ತಂದೆಗೆ ನಿರಂತರವಾಗಿ ಒಂದು ವಾರದಿಂದ ಕೊಲೆ ಬೆದರಿಕೆ ಹಾಕುತ್ತಿದ್ದರು ಎಂದು ಹೇಳಿದ್ದಾರೆ.