ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದಲ್ಲಿ ತೀವ್ರ ಚರ್ಚೆ ಹುಟ್ಟುಹಾಕಿದ್ದ ಹಿಜಾಬ್ ತೀರ್ಪು ಹೊರಬಿದ್ದಿದ್ದು, ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ಧರಿಸುವಂತಿಲ್ಲ ಎಂದು ರಾಜ್ಯ ಹೈಕೋರ್ಟ್ ಸ್ಪಷ್ಟವಾಗಿ ನಿರ್ದೇಶನ ನೀಡಿದೆ. ಹಿಜಾಬ್ ತೀರ್ಪಿನ ಕುರಿತು ರಾಜ್ಯ, ರಾಷ್ಟ್ರದ ಅನೇಕ ನಾಯಕರು ತಮ್ಮ ಅಭಿಪ್ರಾಯ ವ್ಯಕ್ತಪಡಿಸುತ್ತಿದ್ದಾರೆ. ಬಹುತೇಕರು ತೀರ್ಪನ್ನು ಸ್ವಾಗತಿಸಿದ್ದಾರೆ.
ಈ ನಡುವೆ ಜಮ್ಮು-ಕಾಶ್ಮೀರದ ನ್ಯಾಶನಲ್ ಕಾನ್ಫರೆನ್ಸ್ ಪಕ್ಷದ ಒಮರ್ ಅಬ್ದುಲ್ಲಾ ಹಾಗೂ ಪಿಡಿಪಿ ಪಕ್ಷದ ಮೆಹಬೂಬಾ ಮುಫ್ತಿ ಅವರು ಟ್ವೀಟ್ ಮುಖೇನ ಪ್ರತಿಕ್ರಿಯೆ ನೀಡಿದ್ದು, ನ್ಯಾಯಾಲಯದ ಆದೇಶ ತಮಗೆ ತೀವ್ರ ನಿರಾಸೆ ತಂದಿದೆ ಎಂದಿದ್ದಾರೆ.
ಟ್ವೀಟ್ ಮೂಲಕ ತಮ್ಮ ಅಭಿಪ್ರಾಯ ಹಂಚಿಕೊಂಡಿರುವ ಒಮರ್ ಅಬ್ದುಲ್ಲಾ ಹೈಕೋರ್ಟ್ ತೀರ್ಪು ನಿರಾಸೆ ತಂದಿದೆ. ಹಿಜಾಬ್ ಅನ್ನು ಮಹಿಳೆ ಧರಿಸಲು ಇಷ್ಟಪಡುತ್ತಾಳೆ ಎಂದರೆ ಅದು ಆಕೆಯ ಆಯ್ಕೆಯ ಹಕ್ಕಾಗಿರುತ್ತದೆ. ಇಂಥ ಮೂಲಭೂತ ಹಕ್ಕನ್ನು ಕೋರ್ಟ್ ಪುರಸ್ಕರಿಸದಿರುವುದು ದುರಾದೃಷ್ಟಕರ ಎಂದಿದ್ದಾರೆ.
Very disappointed by the verdict of the Karnataka High Court. Regardless of what you may think about the hijab it’s not about an item of clothing, it’s about the right of a woman to choose how she wants to dress. That the court didn’t uphold this basic right is a travesty.
— Omar Abdullah (@OmarAbdullah) March 15, 2022
ಮೆಹಬೂಬಾ ಮುಫ್ತಿ ಟ್ವೀಟ್ ಮಾಡಿ, , ಹಿಜಾಬ್ ವಿವಾದಕ್ಕೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್ ನೀಡಿದ ತೀರ್ಪು ನಿಜಕ್ಕೂ ನಿರಾಸೆ ಮೂಡಿಸಿದೆ. ಮಹಿಳಾ ಸಬಲೀಕರಣದ ಬಗ್ಗೆ ಮಾತುಗಳನ್ನಾಡುತ್ತಲೇ ಆಕೆಯ ಹಕ್ಕುಗಳು, ಆಯ್ಕೆಯನ್ನು ನಿರಾಕರಿಸಲಾಗುತ್ತಿದೆ. ಈ ಮೂಲಕ ಮುಸ್ಲಿಂ ಹೆಣ್ಣುಮಕ್ಕಳ ಆಯ್ಕೆ ಹಕ್ಕನ್ನು ದಮನ ಮಾಡಲಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.