ಹೊಸ ದಿಗಂತ ವರದಿ, ಮೈಸೂರು:
ಸ್ಕೂಟರ್ನಲ್ಲಿ ಹೋಗುತ್ತಿದ್ದ ಮಹಿಳೆಯೊಬ್ಬರ ಕತ್ತಿನಲ್ಲಿದ್ದ ಚಿನ್ನದ ಸರವನ್ನು ದುಷ್ಕರ್ಮಿಗಳು ಕಿತ್ತುಕೊಂಡು ಪರಾರಿಯಾಗಿರುವ ಘಟನೆ ಮೈಸೂರಿನ ಕುವೆಂಪುನಗರದ ಬಂದoತಮ್ಮ ಕಾಳಮ್ಮ ದೇವಸ್ಥಾನದ ಬಳಿ ನಡೆದಿದೆ.
ನಗರದ ಅಗ್ರಹಾರದ ನಿವಾಸಿ ಭಾಮಾ (42) ಸರಕಳೆದಕೊಂಡಿರುವವರು. ಇವರು ತಮ್ಮ ಸ್ನೇಹಿತೆಯೊಂದಿಗೆ ಸ್ಕೂಟರ್ನಲ್ಲಿ ಹೋಗುತ್ತಿದ್ದಾಗ, ಹಿಂದಿನಿoದ ಬೈಕ್ನಲ್ಲಿ ಬಂದ ದುಷ್ಕರ್ಮಿಗಳು ಭಾಮಾರ ಕತ್ತಿನಲ್ಲಿದ್ದ ಚಿನ್ನದ ಸರವನ್ನು ಬಲವಾಗಿ ಕಿತ್ತುಕೊಂಡು ಪರಾರಿಯಾಗಿದ್ದಾರೆ. ಇದರಿಂದಾಗಿ ಆಯಾ ತಪ್ಪಿ ಸ್ಕೂಟರ್ನಿಂದ ಬಿದ್ದ ಭಾಮಾ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದರು. ಈ ಬಗ್ಗೆ ಕುವೆಂಪುನಗರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.