ಡಿ.3ರಂದು ಬೆಂಗಳೂರಿನಲ್ಲಿ ಗಣಿ ಹೂಡಿಕೆದಾರರ ಸಮಾವೇಶ: ಪ್ರಹ್ಲಾದ್ ಜೋಶಿ

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಡಿಸೆಂಬರ್ 3 ರಂದು ಬೆಂಗಳೂರಿನಲ್ಲಿ ಗಣಿಹೂಡಿಕೆದಾರರ ಸಮಾವೇಶ ನಡೆಯಲಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಾರೆ.

ಈ ಬಗ್ಗೆ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಬೆಂಗಳೂರಿನಲ್ಲಿ ಗಣಿಗಾರಿಕೆ ಕುರಿತಂತೆ ಹೂಡಿಕೆದಾರರ ಸಮಾವೇಶ ಆಯೋಜಿಸಲಾಗಿದೆ. ಆಸಕ್ತರು ಸಮಾವೇಶದಲ್ಲಿ ಭಾಗವಹಿಸಬಹುದು ಎಂದರು.

ಸಮಾರಂಭದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಭಾಗವಹಿಸಲಿದ್ದು, ವಿವಿಧ ವಾಣಿಜ್ಯ ಗಣಿಗಳ ಮೆಗಾ ಹರಾಜು ಕುರಿತು ಹೂಡಿಕೆದಾರರಿಗೆ ಮಾಹಿತಿ ಒದಗಿಸಲಾಗುತ್ತದೆ ಎಂದು ಜೋಶಿ ಹೇಳಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!